ಅ.9ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಮುಖ್ಯಮಂತ್ರಿ

Spread the love

ಅ.9ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಮುಖ್ಯಮಂತ್ರಿ

ಮ0ಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಕ್ಟೋಬರ್ 9ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.

  ಅಂದು  ಮಧ್ಯಾಹ್ನ 12.20ಕ್ಕೆ ಮಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿಗಳು,  1.15ಕ್ಕೆ ಬಂಟ್ವಾಳ ಐ.ಬಿ.ಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಬಂಟ್ವಾಳ ಪುರಸಭೆಯ ಜೋಡುಮಾರ್ಗ ಉದ್ಯಾನವನವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ.

ನಂತರ ಪುತ್ತೂರು ತಾಲೂಕಿನ  ಕೊಯಿಲಕ್ಕೆ ಆಗಮಿಸಿ, ಮಧ್ಯಾಹ್ನ 3ಗಂಟೆಗೆ ಅಲ್ಲಿ ನೂತನ ಪಶುವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ 4.30ಕ್ಕೆ ಕೊಯಿಲದಿಂದ ನಿರ್ಗಮಿಸಿ, ಸಂಜೆ 6 ಗಂಟೆಗೆ  ಮಂಗಳೂರು ವಿಮಾನನಿಲ್ದಾಣಕ್ಕೆ  ಆಗಮಿಸಲಿರುವ ಮುಖ್ಯಮಂತ್ರಿಗಳು, ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.


Spread the love