ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸ್ವೀಕರಿಸಲಾರೆ : ಜಿ.ರಾಜಶೇಖರ್

Spread the love

ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸ್ವೀಕರಿಸಲಾರೆ : ಜಿ.ರಾಜಶೇಖರ್
ಉಡುಪಿ: ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಅಧ್ಯಕ್ಷ ಜಿ ರಾಜಶೇಖರ್ ಅವರ ಬಹುವಚನ ಭಾರತ ಕೃತಿಕಗೆ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿದ್ದು, ಇದನ್ನು ಜಿ ರಾಜಶೇಖರ್ ಅವರು ನಿರಾಕರಿಸಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು ರಾಜ್ಯ ಸಾಹಿತ್ಯ ಅಕಾಡೆಮಿ ನನ್ನ ‘ಬಹುವಚನ ಭಾರತ’ ಕೃತಿಗೆ ಪ್ರಶಸ್ತಿ ನೀಡಿದೆ. ಅಕಾಡೆಮಿ ನನ್ನ ಬಗ್ಗೆ ತೋರಿದ ಗೌರವಕ್ಕೆ ನಾನು ಕೃತಜ್ಞ. ಆದರೆ, 2015ರಲ್ಲಿ ಸಾಹಿತಿಗಳು ತಮಗೆ ನೀಡಿದ ಪ್ರಶಸ್ತಿಗಳ ನಿರಾಕರಣೆ / ವಾಪಾಸಾತಿಗೆ ಯಾವ ಸನ್ನಿವೇಶ ಕಾರಣವಾಯಿತೋ, ಆ ಸನ್ನಿವೇಶ ಈಗ ಇನ್ನಷ್ಟು ಹದಗೆಟ್ಟಿದೆ. ಹಾಗಾಗಿ ಈ ಪ್ರಶಸ್ತಿಯನ್ನ ನಾನು ಸ್ವೀಕರಿಸಲಾರೆ ಎಂದು ತಿಳಿಸಿದ್ದಾರೆ.


Spread the love