ಕ್ರಿಕೆಟ್ ಬೆಟ್ಟಿಂಗ್ ಮೇಲೆ ದಾಳಿ- ಒರ್ವನ ಬಂಧನ

Spread the love

ಮಂಗಳೂರು: ನಗರದ ಕದ್ರಿ ಗ್ರಾಮದ ವ್ಯಾಸನಗರದಲ್ಲಿರುವ ವಿಶ್ವಾಸ್ ಬಾವ ಬಿಲ್ಡರ್ನ ಆಶಾಕಿರಣ ಅಪಾಟ್ ಮೆಂಟ್ ನ ಪ್ಲಾಟ್ ನಂಬ್ರ 310 ರಲ್ಲಿ ಕ್ರಿಕೆಟ್ ಪಂದ್ಯಾವಳಿಯ ಸೋಲು ಗೆಲುವಿನ ಬಗ್ಗೆ ಸಾರ್ವಜನಿಕರಿಂದ ಹಣವನ್ನು ಪಣವನ್ನಾಗಿಟ್ಟುಕೊಂಡು ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಒಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಎಲಿಯಾರ್ ಪದವು ನಿವಾಸಿ ಮೆಲ್ವಿನ್ ವಿಶ್ವಾಸ್ (27) ಎಂದು ಗುರುತಿಸಲಾಗಿದೆ.
ಶನಿವಾರ ಸಂಜೆ ಮಂಗಳೂರು ನಗರದ ಮಂಗಳೂರು ನಗರದ ಕದ್ರಿ ಗ್ರಾಮದ ವ್ಯಾಸನಗರದಲ್ಲಿರುವ ವಿಶ್ವಾಸ್ ಬಾವ ಬಿಲ್ಡರ್ನ ಆಶಾಕಿರಣ ಅಪಾಟ್ ಮೆಂಟ್ ನ ಪ್ಲಾಟ್ ನಂಬ್ರ 310 ರಲ್ಲಿ ನ್ಯೂಜಿಲ್ಯಾಂಡ್ ಮತ್ತು ಅಸ್ಟ್ರೇಲಿಯಾ ನಡುವೆ ನಡೆಯುತ್ತಿದ್ದ ವಿಶ್ವಕಪ್ 20-20 ಕ್ರಿಕೆಟ್ ಪಂದ್ಯಾವಳಿಯ ಸೋಲು ಗೆಲುವಿನ ಬಗ್ಗೆ ಕ್ರಿಕೆಟ್ ಬೆಟ್ಟಿಂಗ್ ಎಂಬ ಅಕ್ರಮ ಜೂಜಾಟವನ್ನು ನಡೆಸಿ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸುತ್ತಿದ್ದ ಬಗ್ಗೆ ಮಂಗಳೂರು ನಗರ ಅಪರಾಧ ಪತ್ತೆ ವಿಭಾಗ(ಸಿಸಿಬಿ) ಪೊಲೀಸರಿಗೆ ದೊರೆತ ಖಚಿತ ವರ್ತಮಾನದಂತೆ ಬೆಟ್ಟಿಂಗ್ ನಡೆಸುತ್ತಿದ್ದ ಆಶಾಕಿರಣ ಅಪಾಟ್ ಮೆಂಟ್ ನ ಪ್ಲಾಟ್ ನಂಬ್ರ 310 ರಲ್ಲಿದ್ದ ಮನೆಗೆ ದಾಳಿ ನಡೆಸಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಮೆಲ್ವಿನ್ ವಿಶ್ವಾಸ್ ಎಂಬವರನ್ನು ದಸ್ತಗಿರಿ ಮಾಡಿ ಅವರ ವಶದಿಂದ ರೂ. 3,02,700/- ನಗದು, 1 ಮೊಬೈಲ್ ಫೋನ್, ಸೋನಿ ಎಲ್ಇಡಿ ಟಿವಿ ಹಾಗೂ ಬೆಟ್ಟಿಂಗ್ ವ್ಯವಹಾರಗಳ ಬಗ್ಗೆ ಬರೆದಿರುವ 1 ಲಾಂಗ್ ಬುಕ್ ನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಿಂದ ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ. 3,35,000/- ರೂ ಆಗಬಹುದು. ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಸೊತ್ತುಗಳನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಪೊಲೀಸ್ ಕಮೀಷನರ್ ಎಂ ಚಂದ್ರಶೇಖರ್ ರವರ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿ.ಸಿ.ಪಿ ಕೆ.ಎಂ. ಶಾಂತರಾಜು, ಹಾಗೂ ಅಪರಾಧ ಹಾಗೂ ಸಂಚಾರ ವಿಭಾಗದ ಡಿ.ಸಿ.ಪಿ ಯವರಾದ ಡಾ: ಸಂಜೀವ್ ಎಂ. ಪಾಟೀಲ್ ರವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ ಘಟಕದ ಸಬ್ ಇನ್ಸಪೆಕ್ಟರ್ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿಗಳು ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.


Spread the love