ಅಶ್ರಫ್ ಕೊಲೆ; ಜೂನ್ 27 ರ ತನಕ ನಾಲ್ಕು ತಾಲೂಕುಗಳಲ್ಲಿ ನಿಷೇಧಾಜ್ಞೆ

Spread the love

ಅಶ್ರಫ್ ಕೊಲೆ; ಜೂನ್ 27 ರ ತನಕ ನಾಲ್ಕು ತಾಲೂಕುಗಳಲ್ಲಿ ನಿಷೇಧಾಜ್ಞೆ
ಬಂಟ್ವಾಳ: ಬಂಟ್ವಾಳದ ಬೆಂಜನಪದುವಿನಲ್ಲಿ ಎಸ್ ಡಿ ಪಿ ಐ ಕಾರ್ಯಕರ್ತ ಅಶ್ರಫ್ ಎಂಬವರನ್ನು ದುಷ್ಕರ್ಮಿಗಳು ಹತ್ಯೆ ನಡೆಸಿರುವ ಹಿನ್ನಲೆಯಲ್ಲಿ ದಕ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮತ್ತು ಸುಳ್ಯ ತಾಲೂಕಿನಲ್ಲಿ ಜೂನ್ 29 ರ ತನಕ ನಿಷೇಧಾಜ್ಷೆ ಹೇರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಅಶ್ರಫ್ ಕೊಲೆಯ ಬಳಿಕ ಕೆಲವು ದುಷ್ಕರ್ಮಿಗಳು ಬಸ್ಸುಗಳು ಹಾಗೂ ಕೆಲವು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪೋಲಿಸರು ಹೆಚ್ಚಿನ ಮಟ್ಟದ ಭದ್ರತೆಯನ್ನು ಒದಗಿಸಿದ್ದಾರೆ. ಮುಂಜಾಗ್ರತ ಕ್ರಮವಾಗಿ ಜಿಲ್ಲಾಧಿಕಾರಿ ನಾಲ್ಕು ತಾಲೂಕುಗಳಲ್ಲಿ ನಿಷೇಧಾಜ್ಷೆ ಹೇರಿದ್ದಾರೆ.


Spread the love