ಈಜುಕೊಳದಲ್ಲಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು

Spread the love

ಈಜುಕೊಳದಲ್ಲಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು

ಪುತ್ತೂರು: ಈಜುಕೊಳದಲ್ಲಿ ಈಜಲು ಇಳಿದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಪುತ್ತೂರಿನ ಹೊರವಲಯದ ದರ್ಬೆ ಎಂಬಲ್ಲಿ ಮಂಗಳವಾರದ ಮಧ್ಯಾಹ್ನ ನಡೆದಿದೆ.

ಮೃತರನ್ನು ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕೈಕಾರ ತೊಟ್ಟಿಲು ಎಂಬಲ್ಲಿನ ಗಂಗಾಧರ ರೈ ಎಂಬವರ ಮಗ ಕಾರ್ತಿಕ್ ರೈ (19) ಎಂದು ಗುರುತಿಸಲಾಗಿದೆ. ಕಾರ್ತಿಕ್ ಅವರು ಪುತ್ತೂರು ಫಿಲೋಮಿನಾ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿಯಾಗಿದ್ದರು.

ಕಾರ್ತಿಕ್ ಅವರು ತನ್ನ ಗೆಳೆಯನೊಂದಿಗೆ ದರ್ಬೆಯ ಖಾಸಗಿ ಈಜುಕೊಳದಲ್ಲಿ ಈಜಲು ತೆರಳಿದ್ದು, ಈಜುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ನೀರಿನಲ್ಲಿ ಮುಳುಗಿದ್ದರೆನ್ನಲಾಗಿದೆ. ಕೂಡಲೇ ಅವರನ್ನು ಮೇಲಕ್ಕೆತ್ತಲಾಯಿತಾದರೂ ಅದಾಗಲೇ ಕಾರ್ತಿಕ್ ಮೃತಪಟ್ಟಿದ್ದರು. ಕಾರ್ತಿಕ್ ಅವರು ಈಜಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆಯ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love