ಉಳ್ಳಾಲ ಟಾರ್ಗೆಟ್ ಗ್ರೂಪಿನ ಸಹಚರನ ಬಂಧನ

Spread the love

ಉಳ್ಳಾಲ ಟಾರ್ಗೆಟ್ ಗ್ರೂಪಿನ ಸಹಚರನ ಬಂಧನ

ಮಂಗಳೂರು:  ನಗರದ ಉಳ್ಳಾಲದ ಮೇಲಂಗಡಿ ದರ್ಗಾ ನಿವಾಸಿಯಾದ ಸುರ್ಮೋ ಇಮ್ರಾನ್ @ ಇಮ್ರಾನ್ ಎಂಬವನನ್ನು  ದಸ್ತಗಿರಿ ಮಾಡುವಲ್ಲಿ ಮಂಗಳೂರು ದಕ್ಷಿಣ ರೌಡಿ ನಿಗ್ರಹದ ದಳದ  ಪೊಲೀಸರು ಯಶಸ್ವಿಯಾಗಿರುತ್ತಾರೆ.

 ಮಂಗಳೂರು ದಕ್ಷಿಣ ಉಪ ವಿಭಾಗದ ರೌಡಿ ನಿಗ್ರಹ ದಳದ ಮತ್ತು ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಿಗೆ  ಮುಂಬಾಯಿ ನಗರದ ದಾದರ್ ರೈಲ್ವೆ ನಿಲ್ದಾಣದ ಬಳಿಯಲ್ಲಿರುವ ವುಡ್ ಲ್ಯಾಂಡ್ ಗೆಸ್ಟ್ ಹೌಸ್ ಲಾಡ್ಜ್ ನಲ್ಲಿ ವಾಸವಾಗಿರುವ ಬಗ್ಗೆ ದೊರೆತ ಮಾಹಿತಿಯಂತೆ ರೌಡಿ ನಿಗ್ರಹದಳದ ಸಿಬ್ಬಂದಿಯವರು ದಾಳಿ ಮಾಡಿ ಸುರ್ಮೋ ಇಮ್ರಾನ್ ನನ್ನು ವಶಕ್ಕೆ ಪಡೆದಿರುವುದಾಗಿದೆ. ಈತನು ಉಳ್ಳಾಲದಲ್ಲಿ ನಡೆದ ದಾವುದ್ ಎಂಬಾತನನ್ನು  ತನ್ನ ಸಹಚರರೊಂದಿಗೆ ಕೊಲೆಗೆ ಯತ್ನಿಸಿದ ಆರೋಪಿಯಾಗಿದ್ದು ನಂತರ ತಲೆ ಮರೆಸಿಕೊಂಡಿದ್ದ.

ಈತನ ವಿರುದ್ದ ಬಜ್ಪೆ ಉಳ್ಳಾಲ ಮತ್ತು ಯಲ್ಲಾಪುರ ಪೋಲಿಸ್ ಠಾಣೆಗಳಲ್ಲಿ ಒಟ್ಟು 3 ವಾರಂಟ್ ಗಳಿದ್ದು ನ್ಯಾಯಲಯಾಕ್ಕೆ ಹಾಜರಾಗದೇ ಇದ್ದು ತಲೆ ಮರೆಸಿಕೊಂಡಿರುವುದಾಗಿದೆ. ಈತನ ವಿರುದ್ದ ನಗರದ ಉಳ್ಳಾಲ, ಬಜ್ಪೆ, ಮತ್ತು ಯಲ್ಲಾಪುರ ಠಾಣೆಗಳಲ್ಲಿ ಕೊಲೆಯತ್ನ,ದರೋಡೆ,ದರೋಡೆಗೆ ಯತ್ನ ಮೊದಲಾದ ಸುಮಾರು 9 ಪ್ರಕರಣಗಳು ಧಾಖಲಾಗಿರುತ್ತದೆ.ಮುಂದಿನ ಕ್ರಮದ ಬಗ್ಗೆ ಉಳ್ಳಾಲ ಪೋಲಿಸ್ ಠಾಣೆಗೆ ಹಸ್ತಂತರ ಮಾಡಲಾಗಿದೆ. ನವೆಂಬರ್ 19 ರಂದು  ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿ ನ್ಯಾಯಾಂಗ ಬಂಧನದಲ್ಲಿರುತ್ತಾನೆ.

ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಟಿ.ಆರ್‌.ಸುರೇಶ್, ಐ.ಪಿ.ಎಸ್. ರವರ ನಿರ್ದೇಶನದಂತೆ, ಹನುಮಂತರಾಯ (ಐಪಿಎಸ್‌) ಡಿ.ಸಿ.ಪಿ (ಕಾನೂನು ಮತ್ತು ಸುವ್ಯವಸ್ಥೆ) ಮತ್ತು  ಉಮಾ ಪ್ರಶಾಂತ್, ಡಿ.ಸಿ.ಪಿ (ಅಪರಾಧ ಮತ್ತು ಸಂಚಾರ ವಿಭಾಗ) ರವರ ಮಾರ್ಗದರ್ಶನದಲ್ಲಿ  ಮಂಗಳೂರು ರೌಡಿ ನಿಗ್ರಹ ದಳದ ಎ.ಸಿ.ಪಿ. ಯವರು ಮತ್ತು ಸಿಬ್ಬಂದಿಯವರು  ಪತ್ತೆ ಕಾರ್ಯದಲ್ಲಿ ಭಾಗವಹಿಸಿರುತ್ತಾರೆ.


Spread the love