ಉಳ್ಳಾಲ ಬೀಚಿನಲ್ಲಿ ಇಬ್ಬರು ಯುವಕರು ನೀರು ಪಾಲು

Spread the love

ಉಳ್ಳಾಲ ಬೀಚಿನಲ್ಲಿ ಇಬ್ಬರು ಯುವಕರು ನೀರು ಪಾಲು

ಮಂಗಳೂರು: ಪ್ರವಾಸಕ್ಕಾಗಿ ಬಂದ ತುಮಕೂರು ಜಿಲ್ಲೆಯ ಇಬ್ಬರು ಯುವಕರು ಸಮುದ್ರಪಾಲಾದ ಘಟನೆ ಉಳ್ಳಾಲದಲ್ಲಿ ಬುಧವಾರ ನಡೆದಿದೆ.

ಮೃತರನ್ನು ತುಮಕೂರು ಜಿಲ್ಲೆ ಶಿರಾ ತಾಲೂಕಿನ ಶಾರೂಖ್ (19) ಮತ್ತ ಹಝಾಝ್ ಯಾನೆ ಚೋಟು (19) ಎಂದು ಗುರುತಿಸಲಾಗಿದೆ.

ತುಮಕೂರಿನಿಂದ ಉಳ್ಳಾಲ ದರ್ಗಾಕ್ಕೆ ಆಗಮಿಸಿದ್ದ ಇವರು ಸ್ನಾನಕ್ಕೆಂದು ಸಮುದ್ರಕ್ಕಿಳಿದ ವೇಳೆ ಅಲೆಗಳ ಅಬ್ಬರಕ್ಕೆ ಸಿಲುಕಿ ಸಮುದ್ರಪಾಲಾಗಿದ್ದಾರೆ ಎನ್ನಲಾಗಿದೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಹತ್ತು ಮಂದಿ ಸಂಬಂಧಿಕರು ತುಮಕೂರಿನಿಂದ ಉಳ್ಳಾಲಕ್ಕೆ ಬಂದಿದ್ದರು ಎಂದು ತಿಳಿದು ಬಂದಿದೆ.


Spread the love