ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹರಕ್ಷಕದಳದ ಸೇವೆ ಅಮೂಲ್ಯವಾದುದು; ಡಿವೈಎಸ್ಪಿ ಕುಮಾರಸ್ವಾಮಿ

Spread the love

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹರಕ್ಷಕದಳದ ಸೇವೆ ಅಮೂಲ್ಯವಾದುದು; ಡಿವೈಎಸ್ಪಿ ಕುಮಾರಸ್ವಾಮಿ

ಉಡುಪಿ : ಜಿಲ್ಲಾ ಗೃಹರಕ್ಷಕದಳ, ಉಡುಪಿ ಜಿಲ್ಲೆ ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲೆಯ ಗೃಹರಕ್ಷಕದಳದ ಡೆಪ್ಯುಟಿ ಕಮಾಂಡೆಟ್ ರಮೇಶ್, ಮಣಿಪಾಲ ಘಟಕದ ಘಟಕಾಧಿಕಾರಿ ಸರಸ್ವತಿ ಕೋಟ್ಯಾನ್, ಪಡುಬಿದ್ರೆ ಘಟಕದ ಘಟಕಾಧಿಕಾರಿ ನವೀನ್ ಕುಮಾರ್, ಬೈಂದೂರು ಘಟಕದ ರಾಘವೇಂದ್ರ.ಎನ್, ಕಾಪು ಘಟಕದ  ಲಕ್ಷ್ಮೀನಾರಾಯಣ ರಾವ್, ಕುಂದಾಪುರ ಘಟಕದ ಭಾಸ್ಕರ ಸಾರ್ಜೇಂಟ್ ಇವರಿಗೆ ಉಡುಪಿ ಜಿಲ್ಲಾ ಗೃಹರಕ್ಷಕದಳ ಕಚೇರಿ ಆವರಣದಲ್ಲಿ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಉಪಾಧೀಕ್ಷಕ ಕುಮಾರಸ್ವಾಮಿ ಮಾತನಾಡಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹರಕ್ಷಕದಳದ ಸೇವೆ ಅತ್ಯಗತ್ಯವಾಗಿದ್ದು, ಜಿಲ್ಲೆಯ ಗೃಹಕ್ಷಕರು ನಿರೀಕ್ಷೆ ಮೀರಿ ನಮ್ಮೊಂದಿಗೆ ಸ್ಪಂದಿಸುತ್ತಿದ್ದಾರೆ. ಅವರ ಸಮಸ್ಯೆಗಳಿಗೆ ತಾವು ಸ್ಪಂದಿಸುವ ಭರವಸೆಯನ್ನು ಅವರು ಈ ಸಂದರ್ಭದಲ್ಲಿ ನೀಡಿದರು. ಹಿಂದಿನ ದಿನಗಳಲ್ಲಿ  ಗೃಹರಕ್ಷಕದಳದವರು ತುರ್ತು ಸಂದರ್ಭದಲ್ಲಿ ಸೇವೆಯನ್ನು ನೀಡುತ್ತಿದ್ದರು; ಈಗ ನಿರಂತರವಾಗಿ ಅವರ ಸೇವೆಯನ್ನು ಇಲಾಖೆ ಪಡೆಯುತ್ತಿದೆ ಎಂದರು.

   ಉಡುಪಿ ಗೃಹರಕ್ಷಕದಳದ ಜಿಲ್ಲಾ ಕಮಾಂಡೆಂಟ್ ಕೆ. ಪ್ರಶಾಂತ್ ಶೆಟ್ಟಿ ವಾರ್ಷಿಕ ವರದಿ ವಾಚಿಸಿದರು. ಕಾರ್ಯಕ್ರಮದಲ್ಲಿ  ಮಕರ ಕನ್ಸ್‍ಸ್ಟ್ರಕ್ಷನ್ ಕಾಪು ಇದರ ಉದ್ಯಮಿ ಸುಧಾಕರ ಶೆಟ್ಟಿ, ಗೃಹರಕ್ಷಕದಳದ ಅಧಿಕಾರಿಗಳು, ಘಟಕಾಧಿಕಾರಿಗಳು, ಗೃಹರಕ್ಷಕ ದಳದ ಪುರುಷ ಹಾಗೂ ಮಹಿಳಾ ಗೃಹರಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸೆಕೆಂಡ್ ಇನ್ ಕಮಾಂಡ್ ಕೆ.ಸಿ.ರಾಜೇಶ್ ಸ್ವಾಗತಿಸಿದರು. ಡೆಪ್ಯುಟಿ ಕಮಾಂಡೆಂಟ್ ರಮೇಶ್ ವಂದಿಸಿ, ಸಾಯಿನಾಥ ಉದ್ಯಾವರ್ ಕಾರ್ಯಕ್ರಮ ನಿರೂಪಿಸಿದರು.


Spread the love