ಕಾರು ರಸ್ತೆ ಬದಿಯ ಕಟ್ಟಡಕ್ಕೆ ಢಿಕ್ಕಿ; ಕುಂದಾಪುರ ಮೂಲದ ನಾಲ್ವರು ಸಜೀವ ದಹನ

m
Spread the love

ಕಾರು ರಸ್ತೆ ಬದಿಯ ಕಟ್ಟಡಕ್ಕೆ ಢಿಕ್ಕಿ; ಕುಂದಾಪುರ ಮೂಲದ ನಾಲ್ವರು ಸಜೀವ ದಹನ

ಬೆಂಗಳೂರು: ಕಾರೊಂದು ರಸ್ತೆ ಬದಿಯ ಕಟ್ಟಡಕ್ಕೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೆಂಕಿ ಹತ್ತಿಕೊಂಡು ಕಾರ್ ನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡ ಘಟನೆ ಹಾಸನದ ಚನ್ನರಾಯಣಪಟ್ಟಣದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

m

ಬೆಂಗಳೂರಿನ ಬಾಣಾವರದ ವಿವೇಕ್ ನಾಯಕ್, ಪತ್ನಿ ರೇಷ್ಮಾನಾಯಕ್ ಮತ್ತು ಅವರ ಇಬ್ಬರು ಮಕ್ಕಳು ಕಾರು ಕಟ್ಟಡಕ್ಕೆ ಹೊಡೆದ ಪರಿಣಾಮವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿವೇಕ್ ನಾಯಕ್ ತನ್ನ ಕುಟುಂಬದೊಂದಿಗೆ ಕಾರ್ ನಲ್ಲಿ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದರು. ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಟ್ಟಡಕ್ಕೆ ಡಿಕ್ಕಿ ಹೊಡೆಯಿತೆನ್ನಲಾಗಿದೆ. ತಕ್ಷಣ ಕಾರ್ ಗೆ ಬೆಂಕಿ ಹತ್ತಿಕೊಂಡು ಕಾರ್ ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸಜೀವ ದಹನಗೊಂಡರು ಎನ್ನಲಾಗಿದೆ.


Spread the love