ಕೆ.ಎಸ್.ಆರ್.ಟಿ.ಸಿ ಬಸ್ ಪರ್ಮಿಟ್ ಮಂಜೂರಾತಿ: ಆಕ್ಷೇಪಣೆ ಆಹ್ವಾನ

Spread the love

ಕೆ.ಎಸ್.ಆರ್.ಟಿ.ಸಿ. ಬಸ್ ಪರ್ಮಿಟ್ ಮಂಜೂರಾತಿ: ಆಕ್ಷೇಪಣೆ ಆಹ್ವಾನ

ಮ0ಗಳೂರು: ಮಂಗಳೂರು ಕೆ.ಎಸ್.ಆರ್.ಟಿ.ಸಿ. ಬಸ್ಸು ನಿಲ್ದಾಣದಿಂದ -ಮೂಡಬಿದ್ರೆ-ಕಾರ್ಕಳ ಮಾರ್ಗದಲ್ಲಿ ಕೆ.ಎಸ್.ಆರ್.ಟಿ.ಸಿ. 16 ಬಸ್ಸುಗಳ ಸಂಚಾರಕ್ಕಾಗಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ, ಮಂಗಳೂರು ದ.ಕ. ರವರಿಗೆ ರಹದಾರಿ ಮಂಜೂರಾತಿಗಾಗಿ ಅರ್ಜಿ ಸಲ್ಲಿಕೆಯಾಗಿರುತ್ತದೆ. ಆದ್ದರಿಂದ ಈ ಮಾರ್ಗದಲ್ಲಿ ಕೆ.ಎಸ್.ಆರ್.ಟಿ.ಸಿ. ಗೆ ರಹದಾರಿ ಮಂಜೂರಾತಿ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.

ಆಕ್ಷೇಪಣೆ ಸಲ್ಲಿಸುವವರು ಅಕ್ಟೋಬರ್ 9 ರೊಳಗೆ ಕಾರ್ಯದರ್ಶಿ, ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಹಾಗೂ ಉಪ ಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಮಂಗಳೂರು ಇವರಿಗೆ ಸಲ್ಲಿಸಲು ಆರ್‍ಟಿಓ ಪ್ರಕಟಣೆ ತಿಳಿಸಿದೆ.


Spread the love