ದ್ವಿಚಕ್ರ ವಾಹನ ಸವಾರರ ಮೇಲೆ ಈಚರ್ ವಾಹನ ಹರಿದು ದಂಪತಿ ಮೃತ್ಯು

Spread the love

ದ್ವಿಚಕ್ರ ವಾಹನ ಸವಾರರ ಮೇಲೆ ಈಚರ್ ವಾಹನ ಹರಿದು ದಂಪತಿ ಮೃತ್ಯು

ಮಂಗಳೂರು: ನಗರದ ನಂತೂರ್ ಸರ್ಕಲ್ ಬಳಿ ಮಂಗಳವಾರ ಸಂಜೆ ನಡೆದ ಟೆಂಪೊ ಮತ್ತು ದ್ವಿಚಕ್ರ ವಾಹನ ನಡುವಿನ ಅಪಘಾತದಲ್ಲಿ ಗಂಭೀರ ಗಾಯಗೊಂಡ ದಂಪತಿ ಮೃತಪಟ್ಟಿದ್ದಾರೆ.

ಮೃತರನ್ನು ಮುಹಮ್ಮದ್ ಸಮೀರ್ ಮತ್ತು ಅವರ ಪತ್ನಿ  ಅಮ್ರೀನ್  ಎಂದು ಗುರುತಿಸಲಾಗಿದೆ.

ಅಮ್ರೀನ್ ಮತ್ತು ಅವರ ಪತಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಸಿಮೆಂಟ್ ಕೊಂಡೊಯ್ಯುತ್ತಿದ್ದ ಈಚರ್ ವಾಹನವೊಂದು ಎಡಕ್ಕೆ ತಿರುಗುವ ವೇಳೆ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿ್ದು, ದಂಪತಿಗಳು ರಸ್ತೆಗೆ ಎಸೆದ ಪರಿಣಾಮ ಈಚರ್ ವಾಹನ ಅವರ ಮೇಲೆಯೇ ಚಲಿಸಿದ್ದು ಪರಿಣಾಮ ಇಬ್ಬರೂ ಕೂಡ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಮ್ರೀನ್ ಕೆಲವೇ ನಿಮಿಷಗಳಲ್ಲಿ ಕೊನೆಯುಸಿರೆಳೆದರೆ ಸಮೀರ್ ರಾತ್ರಿ ಮೃತಪಟ್ಟಿದ್ದಾರೆ. ಇಬ್ಬರ ಮೃತದೇವಹವು ಖಾಸಗಿ ಆಸ್ಪತ್ರೆಯಲ್ಲಿಡಲಾಗಿದೆ.

ಟ್ರಾಫಿಕ್ ಎಸಿಪಿ ಮಂಜುನಾಥ್ ಶೆಟ್ಟಿ, ಪೋಲಿಸರು ಸ್ಥಳಕ್ಕೆ ಆಗಮಿಸಿದ್ದು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love