ಧರ್ಮಸ್ಥಳದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರ ಸ್ವಚ್ಛತಾ ಅಭಿಯಾನ

Spread the love

ಧರ್ಮಸ್ಥಳದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರ ಸ್ವಚ್ಛತಾ ಅಭಿಯಾನ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರ ಸ್ವಚ್ಛತಾ ಅಭಿಯಾನ ಗುರುವಾರ ನಡೆಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಊರಿನ ಸ್ವಯಂ ಸೇವಕರ ಸ್ವಚ್ಛತಾ ಕಾರ್ಯವನ್ನು ವೀಕ್ಷಿಸಿ ಮೆಚ್ಚುಗೆ ಸೂಚಿಸಿದರು.

ಈ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿರಲಿ. ಇಲ್ಲಿಗೇ ನಿಲ್ಲಬಾರದು. ಕ್ಷೇತ್ರದವರೆಗೆ ಪೂಜ್ಯ ಬಾವನೆಯಿಂದ ಆಗಮಿಸಿದರೂ ಕ್ಷೇತ್ರದ ಆವರಣದಲ್ಲಿ ಗಲೀಜು ಮಾಡಿ ಹೋಗುವ ಯಾತ್ರಿಗಳಿದ್ದಾರೆ. ಆದ್ದರಿಂದ ಯಾತ್ರಿಕರಲ್ಲೂ ಜಾಗೃತಿ ಮೂಡಬೇಕು ಎಂದರು.
ಶ್ರೀ ಮಂಜುನಾಥ ಸ್ವಾಮಿ ದೇವಾಲಯದ ಆವರಣ, ಸ್ವರ್ಣಗೋಪುರ ಮೊದಲಾದವನ್ನು ಶುಚಿಗೊಳಿಸಲಾಯಿತು. ಡಿ. ಹರ್ಷೇಂದ್ರ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.


Spread the love