ಬೈಕ್ ಮೇಲೆ ಬಿದ್ದ ವಿದ್ಯುತ್ ಕಂಬ-ಸಹ ಸವಾರ ಮೃತ್ಯು

Spread the love

ಬೈಕ್ ಮೇಲೆ ಬಿದ್ದ ವಿದ್ಯುತ್ ಕಂಬ-ಸಹ ಸವಾರ ಮೃತ್ಯು

ಕಡಬ: ಹಾಲುಮಡ್ಡಿ(ದೂಪ) ಮರವೊಂದು ವಿದ್ಯುತ್ ಲೈನ್ ಗೆ ಬಿದ್ದ ಪರಿಣಾಮ ವಿದ್ಯುತ್ ಕಂಬವು ಬೈಕ್ ಮೇಲೆ ಬಿದ್ದು ಸಹ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಲ್ಲಾಜೆ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.

ಘಟನೆಯಿಂದಾಗಿ ನೆಟ್ಟಣದಿಂದ ಕಡಬ ಕಡೆಗೆ ತೆರಳುತ್ತಿದ್ದ ಕೊಂಬಾರು ಕಾಲನಿ ನಿವಾಸಿಗಳಾದ ವಾಸುದೇವ ಎಂಬವರ ಪುತ್ರ ಮನೋಹರ್(19) ಮೃತಪಟ್ಟಿದ್ದು, ದಿ| ಸೆಲ್ವರಾಜು ಎಂಬವರ ಪುತ್ರ ಪ್ರಭಾಕರ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮರ್ಧಾಳದಿಂದ ಕೈಕಂಬವರೆಗೆ ಸುಬ್ರಹ್ಮಣ್ಯ – ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಇಕ್ಕೆಡೆಗಳಲ್ಲೂ ದೂಪದ ಮರಗಳ ಬುಡಗಳನ್ನು ಟೊಳ್ಳಾಗಿಸಿ ಎಣ್ಣೆ ತೆಗೆದು ಮರಗಳನ್ನು ಕಡಿಯದೆ ಹಾಗೇ ಬಿಟ್ಟ ಪರಿಣಾಮ ಗಾಳಿ ಬೀಸಿದಾಗ ಮರಗಳು ರಸ್ತೆಗುರುಳುತ್ತಿದ್ದು, ಕಳೆದೆರಡು ವರ್ಷಗಳಿಂದ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿದೆ.


Spread the love