ಬೈಲಹೊಂಗಲದಲ 37ನೇ ರಾಜ್ಯ ಮಟ್ಟದ ಕೃಷಿ ಮೇಳಕ್ಕೆ ನಿರ್ಮಲಾ ಸೀತಾರಾಮನ್

Spread the love

ಬೈಲಹೊಂಗಲದಲ 37ನೇ ರಾಜ್ಯ ಮಟ್ಟದ ಕೃಷಿ ಮೇಳಕ್ಕೆ ನಿರ್ಮಲಾ ಸೀತಾರಾಮನ್

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಇದೇ 25ರಿಂದ 27ರ ವರೆಗೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ 37ನೇ ರಾಜ್ಯ ಮಟ್ಟದ ಕೃಷಿ ಮೇಳ ಆಯೋಜಿಸಲಾಗಿದೆ.
ಸಣ್ಣ ಕೈಗಾರಿಕಾ ಸಚಿವ ರಮೇಶ್ ಜಾರಕಿಹೊಳಿ ಇದೇ 25ರಂದು ಬುಧವಾರ ಕೃಷಿ ಮೇಳ ಉದ್ಘಾಟಿಸುವರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.
ಗಣಿ ಮತ್ತು ಭೂ-ವಿಜ್ಞಾನ ಸಚಿವ ವಿನಯ್ ಕುಲಕರ್ಣಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಯಸ್. ಯಡಿಯೂರಪ್ಪ ಮತ್ತು ಎಚ್.ಡಿ. ಕುಮಾರ ಸ್ವಾಮಿ, ಸಂಸದ ಸುರೇಶ್ ಅಂಗಡಿ ಶುಭಾಶಂಸನೆ ಮಾಡುವರು.
ಗ್ರಾಮೀಣ ಕ್ರೀಡೆಗಳು, ಜಾನುವಾರು ಪ್ರದರ್ಶನ, ವಿಚಾರಗೋಷ್ಠಿ, ತಜ್ಞರಿಂದ ಮಾಹಿತಿ, ಜನಪ್ರತಿನಿಧಿಗಳೊಂದಿಗೆ ಸಂದರ್ಶನ, ಪ್ರಾತ್ಯಕ್ಷಿತೆ, ವಸ್ತು ಪ್ರದರ್ಶನ ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಇದೇ 27ರಂದು ಶುಕ್ರವಾರ ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಭಾಗವಹಿಸುವರು.
ಕೇಂದ್ರ ಸರ್ಕಾರದ ಕೈಗಾರಿಕಾ ಸಚಿವೆ ನಿರ್ಮಲಾ ಸೀತಾರಾಮನ್, ರೇಷ್ಮೆ ಸಚಿವ ಮಂಜು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಭರದಿಂದ ಸಿದ್ಧತೆಗಳು ನಡೆಯುತ್ತಿವೆ.


Spread the love