ರೈ ವಿರುದ್ದ ಅವಹೇಳನಕಾರಿ ಪದ ಬಳಕೆ ; ಮಠಂದೂರು ಕ್ಷಮೆಯಾಚಿಸುವಂತೆ ಜಿಲ್ಲಾ ಕಾಂಗ್ರೆಸ್ ಆಗ್ರಹ

Spread the love

ರೈ ವಿರುದ್ದ ಅವಹೇಳನಕಾರಿ ; ಮಠಂದೂರು ಕ್ಷಮೆಯಾಚಿಸುವಂತೆ ಜಿಲ್ಲಾ ಕಾಂಗ್ರೆಸ್ ಆಗ್ರಹ

ಮಂಗಳೂರು: ದಕ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ವಿರುದ್ದ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಅವಹೇಳನಕಾರಿಯಾಗಿ ಮಾತನಾಡಿರುವುದಕ್ಕೆ ತಕ್ಷಣ ಕ್ಷಮೆ ಯಾಚಿಸಬೇಕು ಎಂದು , ಜಿಲ್ಲಾ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಹರೀಶ್ ಕುಮಾರ್ ಆಗ್ರಹಿಸಿದ್ದಾರೆ.

ನಗರದಲ್ಲಿ ಗುರುವಾರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು ಬಿಜೆಪಿ ವತಿಯಿಂದ ವಿಟ್ಲದಲ್ಲಿ ನಡೆದ ಮರಳು ಸಮಸ್ಯೆ ವಿರುದ್ಧ ನಡೆದ ಉಪವಾಸ ಸತ್ಯಗ್ರಹದ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈಯನ್ನು ಅವಹೇಳನಕಾರಿ ನಿಂದಿಸಿದ್ದಾರೆ .  ಸಚಿವ ರಮಾನಾಥ ರೈ ಅವರು ಜಿಲ್ಲೆ ಕೋಮುಸೌಹಾರ್ದತೆಗಾಗಿ ಶ್ರಮಿಸುತ್ತಿದ್ದು ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾಗಿ ಸಂಜೀವ ಮಠಂದೂರು ಮಾತನಾಡುವ ಮೊದಲು ಯೋಚಿಸಿ ಮಾತನಾಡಬೇಕು.  ಅವರು ಆಡಿದ ಮಾತಿಗೆ ಕೂಡಲೇ ಕ್ಷಮೆಯಾಚಿಸಬೇಕು ಅದಕ್ಕೆ ತಪ್ಪಿದ್ದಲ್ಲಿ ಜಿಲ್ಲೆಯಲ್ಲಿ ಉಗ್ರವಾದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ವಾರದೊಳಗಾಗಿ ಕ್ಷಮೆಯಾಚಿಸದಿದ್ದರೆ ಮುಂದೆ ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡುತ್ತೇವೆ ಎಂದರು.


Spread the love