ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷರಾಗಿ ವಿಲಾಸ್ ನಾಯಕ್ ನಿಯುಕ್ತಿ

Spread the love

ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷರಾಗಿ ವಿಲಾಸ್ ನಾಯಕ್ ನಿಯುಕ್ತಿ

ಉಡುಪಿ : ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷರಾಗಿದ್ದ ಬೈಕಾಡಿ ಸುಪ್ರಸಾದ್ ಶೆಟ್ಟಿ ಅವರ ತೆರವಾದ ಸ್ಥಾನಕ್ಕೆ ಉಡುಪಿ ಪಾಂಗಾಳ ವಿಲಾಸ್ ನಾಯಕ್ ಇವರನ್ನು ಮುಂದಿನ ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷರಾಗಿ ನಿಯುಕ್ತಿ ಮಾಡಲಾಯಿತು.

vilas-nayak-vhp-presdient vilas-nayak-vhp-presdient-00

ಇವತ್ತು ನಡೆದ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಜಿಲ್ಲಾ ಬೈಠಕ್‍ನಲ್ಲಿ ಈ ನಿರ್ಣಯವನ್ನು ಕೈಗೊಂಡು, ವಿಶ್ವ ಹಿಂದೂ ಪರಿಷದ್‍ನ ಪ್ರಾಂತ ಕಾರ್ಯಾಧ್ಯಕ್ಷ ಪ್ರೊಫೆಸರ್ ಎಂ.ಬಿ ಪುರಾಣಿಕ್ ನೂತನ ಜವಾಬ್ದಾರಿಯನ್ನು ಘೋಷಣೆ ಮಾಡಿದರು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪ್ರಾಂತ ಕಾರ್ಯಾದರ್ಶಿ ಕೃಷ್ಣಮೂರ್ತಿ, ಪ್ರಾಂತ ಬಜರಂಗದಳದ ಸಂಚಾಲಕ ಶರಣ್ ಪಂಪ್‍ವೆಲ್, ವಿಭಾಗ ಸಹಸಂಚಾಲಕ ಸುನಿಲ್. ಕೆ.ಆರ್, ಜಿಲ್ಲಾ ಕಾರ್ಯದರ್ಶಿ ರತ್ನಾಕರ್ ಅಮೀನ್, ಬಜರಂಗದಳದ ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್ ಮತ್ತು ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.


Spread the love