ಹಿರಿಯಡ್ಕ ವೀರಭದ್ರ ದೇವಸ್ಥಾನ ಜೀಣೋದ್ಧಾರಕ್ಕೆ ನೆರವು- ಪ್ರಮೋದ್ ಮಧ್ವರಾಜ್

Spread the love

ಹಿರಿಯಡ್ಕ ವೀರಭದ್ರ ದೇವಸ್ಥಾನ ಜೀಣೋದ್ಧಾರಕ್ಕೆ ನೆರವು- ಪ್ರಮೋದ್ ಮಧ್ವರಾಜ್

ಉಡುಪಿ : ಪುರಾತನ ಮತ್ತು ಕಾರಣಿಕ ಶಕ್ತಿಯಿಂದ ಕೂಡಿದ ಹಿರಿಯಡ್ಕ ಶ್ರೀ ವೀರಭದ್ರ ದೇವಸ್ಥಾನದ ಜೀರ್ಣೋದ್ದಾರಕ್ಕೆ ಸರಕಾರದಿಂದ ಗರಿಷ್ಠ ಆರ್ಥಿಕ ನೆರವು ನೀಡಲು ಪ್ರಯತ್ನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.
ಅವರು ಗುರುವಾರ ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದರು.

ಭಕ್ತಾಧಿಗಳ ಕಲ್ಪನೆಯಂತೆ ದೇವಸ್ಥಾನವನ್ನು ಜೀಣೋದ್ಧಾರಗೊಳಿಸಲಾಗುತ್ತಿದ್ದು, ಸರಕಾರದಿಂದ ಆರ್ಥಿಕ ನೆರವು ದೊರಕಿಸುವ ಕುರಿತಂತೆ ಶಾಸಕರಾದ ವಿನಯ ಕುಮಾರ್ ಸೊರಕೆ ಅವರ ಜೊತೆ ಚರ್ಚಿಸಿ ಗರಿಷ್ಠ ನೆರವು ದೊರಕಿಸಲಾಗುವುದು ಎಂದು ಸಚಿವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ, ಉಪಾಧ್ಯಕ್ಷೆ ಸಂಧ್ಯಾ, ಹಿರಿಯಡ್ಕ ಗ್ರಾ.ಪಂ. ಅಧ್ಯಕ್ಷೆ ಮಾಲತಿ ಆಚಾರ್ಯ, ಜಿಲ್ಲಾ ಪಂಚಾಯತ್ ಸದಸ್ಯೆ ಚಂದ್ರಿಕಾ,ನಗರಸಭೆ ಸದಸ್ಯ ರಮೇಶ್ ಕಾಂಚನ್, ಸ್ಥಳೀಯ ಗ್ರಾ.ಪಂ ಮತ್ತು ತಾ.ಪಂ.ಜನಪ್ರತಿನಿಧಿಗಳು, ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಗೋವರ್ಧನ್ ದಾಸ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.


Spread the love