ಅಕ್ರಮ ಗೋಹತ್ಯೆ ಪ್ರಕರಣ: ಮನೆ, ದನದ ಕೊಟ್ಟಿಗೆ ಜಪ್ತಿ
ಬಂಟ್ವಾಳ: ಅಕ್ರಮ ಗೋಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ನಡೆದ ಸ್ಥಳವನ್ನು ಪೊಲೀಸರು ಜಪ್ತಿ ಮಾಡುವ ಮೂಲಕ ಮಹತ್ವದ ಕ್ರಮ ಕೈಗೊಂಡಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪರಾಧ ಸಂಖ್ಯೆ 68/2026ರ ಪ್ರಕರಣದಲ್ಲಿ, ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020ರ ಕಲಂ 4, 7 ಹಾಗೂ 12ರಡಿ ತನಿಖೆ ನಡೆಯುತ್ತಿದೆ.
ಪ್ರಕರಣದ ತನಿಖೆಯ ಭಾಗವಾಗಿ ಬಂಟ್ವಾಳ ತಾಲೂಕಿನ ಸಜೀಪ ಮೂಡಾ ಗ್ರಾಮದ ಕೊಳಕೆ ಪಂಜಾಜೆ ಪ್ರದೇಶದಲ್ಲಿರುವ ಆರೋಪಿ ಮುಸ್ತಫಾ ಬಾಬ್ತು ಅವರ ಮನೆ ಹಾಗೂ ದನದ ಕೊಟ್ಟಿಗೆಯನ್ನು ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020’ರ ಕಲಂ 8(1)ರ ಅನ್ವಯ ಜಪ್ತಿ ಮಾಡಲಾಗಿದೆ.
ಜಪ್ತಿ ಕ್ರಮದ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಸಲುವಾಗಿ ಮಂಗಳೂರು ಉಪವಿಭಾಗದ ಮಾನ್ಯ ಉಪ ವಿಭಾಗೀಯ ದಂಡಾಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
