ಉಡುಪಿ: ಚುನಾವಣೆಗೆ ಕೆಪಿಸಿಸಿ ಪ್ರಚಾರ ಸಮಿಯಿಂದ ವಿಧಾನಸಭಾ ಕ್ಷೇತ್ರಗಳಿಗೆ ಉಸ್ತುವಾರಿಗಳ ನೇಮಕ

Spread the love

ಉಡುಪಿ: ಚುನಾವಣೆಗೆ ಕೆಪಿಸಿಸಿ ಪ್ರಚಾರ ಸಮಿಯಿಂದ ವಿಧಾನಸಭಾ ಕ್ಷೇತ್ರಗಳಿಗೆ ಉಸ್ತುವಾರಿಗಳ ನೇಮಕ

ಉಡುಪಿ: ಮುಂಬರುವ 2023 ರ ವಿಧಾನಸಭಾ ಚುನಾವಣೆಯ ದೃಷ್ಠಿಯಿಂದ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಪದಾಧಿಕಾರಿಗಳಿಗೆ ವಿಧಾನಸಭಾ ಕ್ಷೇತ್ರವಾರು ಉಸ್ತುವಾರಿಯನ್ನು ನೇಮಿಸಿ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ಎಂ.ಬಿ ಪಾಟೀಲ್ ಅವರು ಆದೇಶ ಹೊರಡಿಸಿದ್ದಾರೆ.

ಅದರಂತೆ ಉಡುಪಿ ಜಿಲ್ಲೆಯ ಬೈಂದೂರು ಮತ್ತು ಕುಂದಾಪುರ ವಿಧಾನಸಭಾ ಕ್ಷೇತ್ರಗಳಿಗೆ ದಿನೇಶ್ ಪುತ್ರನ್ ಮತ್ತು ಉಡುಪಿ, ಕಾಪು ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರಗಳಿಗೆ ವಿಘ್ನೇಶ್ ಕಿಣಿ ಅವರುಗಳನ್ನು ನೇಮಿಸಲಾಗಿದೆ.

ನೇಮಕಗೊಂಡ ಉಸ್ತುವಾರಿಗಳು ಕೂಡಲೇ ಅವರುಗಳಿಗೆ ನೀಡಿದ ಜವಾಬ್ದಾರಿಯನ್ನು ವಹಿಸಿಕೊಂಡು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಸೂಚಿಸಿದ್ದಾರೆ.


Spread the love

Leave a Reply

Please enter your comment!
Please enter your name here