ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬಿಎಲ್ಎ-2 ಮತ್ತು ಬೂತ್ ಅಧ್ಯಕ್ಷರ ಮಾಹಿತಿ ಕಾರ್ಯಗಾರ

Spread the love

ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬಿಎಲ್ಎ-2 ಮತ್ತು ಬೂತ್ ಅಧ್ಯಕ್ಷರ ಮಾಹಿತಿ ಕಾರ್ಯಗಾರ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ BLA-2 ಮತ್ತು ಬೂತ್ ಅಧ್ಯಕ್ಷರ ಮಾಹಿತಿ ಕಾರ್ಯಗಾರ ಸಭೆಯು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಉಸ್ತುವಾರಿಗಳು, ತ್ರಿಸೂರಿನ ಸಂಸದರಾದ ಟಿ.ಎನ್ ಪ್ರತಾಪನ್ ಅವರು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ 132 ಬಿಎಲ್ಎ-2 ಮತ್ತು ಬೂತ್ ಅಧ್ಯಕ್ಷರು ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಬಿಎಲ್ಎ-2 ಮತ್ತು ಬೂತ್ ಅಧ್ಯಕ್ಷರಿಗೆ ಶಾಲು ಹೊದಿಸಿ ಹೂಗುಚ್ಛ ನೀಡಿ ಗೌರವಿಸಿ ತಾವು ಪಕ್ಷದ ಆಸ್ತಿ ಪಕ್ಷವನ್ನು ತಳಮಟ್ಟದಲ್ಲಿ ಸಂಘಟಿಸಿ ಪಕ್ಷವನ್ನು ಮುನ್ನಡೆಸಬೇಕು ಎಂದು ಮಾತನಾಡಿದರು.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಸ್ತುವಾರಿಗಳಾಗಿ ನನ್ನನ್ನು ನೇಮಕ ಮಾಡಲಾಗಿದೆ. ಉಡುಪಿ ವಿಧಾನಸಭಾ ಕ್ಷೇತ್ರದ ಎಲ್ಲಾ ಮನೆಗಳಿಗೆ, ಎಲ್ಲಾ ಜನರನ್ನು ಭೇಟಿಯಾಗಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಲು ನಾನು ಸಿದ್ಧನಿದ್ದೇನೆ. ನನ್ನೊಂದಿಗೆ ನೀವು ಕೂಡ ಕೈ ಜೋಡಿಸಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸೋಣ. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ನಲ್ಲಿ ಹೇಳಲಾದ 200 ಯೂನಿಟ್ ಉಚಿತ ವಿದ್ಯುತ್, ಪ್ರತಿ ಮನೆಯ ಗೃಹಿಣಿಗೆ 2,000ರೂ. ಬಗ್ಗೆ ಜನರಿಗೆ ಮಾಹಿತಿ ನೀಡಿ ಅವರಿಗೆ ಇಂದಿರಾ ಮಹತ್ವ ತಿಳಿಸಬೇಕಾಗಿದೆ. 2023ಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆರಲಿದೆ. ಬಿಜೆಪಿಯ ಸರ್ಕಾರದ ಜನವಿರೋಧಿ ನೀತಿಯಿಂದ ಜನರು ಕಂಗೆಟ್ಟಿದ್ದಾರೆ ಜನರು ಕಾಂಗ್ರೆಸ್ ಪಕ್ಷವನ್ನು ಅಧಿಕಾರದಲ್ಲಿರಲು ಬಯಸುತ್ತಿದ್ದಾರೆ ಎಂದು ಹೇಳೀದರು

ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಅವರು ಸಭೆಯನ್ನುದ್ದೇಶಿಸಿ ಕಾಂಗ್ರೆಸ್ ಪಕ್ಷದ ಕೊಡುಗೆ, ಕಾಂಗ್ರೆಸ್ ಪಕ್ಷದ ಜನಪರ ಯೋಜನೆಗಳನ್ನು ಸಭೆಯಲ್ಲಿ ವಿವರಿಸಿದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಸ್ವಾಗತಿಸಿದರು. ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ದಿನಕರ್ ಹೇರೂರು ಅವರು ಧನ್ಯವಾದ ನೀಡಿದರು. ಸಭೆಯಲ್ಲಿ ಸತೀಶ್ ಕೊಡುವವರು ಹಾಗೂ ಸತೀಶ್ ಕುಮಾರ್ ಮಂಚಿ ಕಾರ್ಯಕ್ರಮ ನಿರೂಪಿಸಿದರು.

ಈ ಸಭೆಯಲ್ಲಿ ರಾಜ್ಯ ಮೀನುಗಾರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಂಜುನಾಥ್ ಸುನೇಗಾರ್, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ ಏ ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ದಿನೇಶ್ ಪುತ್ರನ್, ಸುಕುಮಾರ್, ನರಸಿಂಹಮೂರ್ತಿ, ಮುರಳಿ ಶೆಟ್ಟಿ, ಗಣೇಶ್ ನೆರ್ಗಿ, ಶ್ಯಾಮಲ ಭಂಡಾರಿ, ಗೀತಾ ವಾಘ್ಲೆ, ಅಣ್ಣಯ್ಯ ಶೇರಿಗಾರ್, ಜಯ ಕುಮಾರ್, ಸುರೇಶ್ ಶೆಟ್ಟಿ ಬನ್ನಂಜೆ, ರೋಶನ್ ಶೆಟ್ಟಿ, ಸೌರಭ್ ಬಲ್ಲಾಳ್, ಗಾಯತ್ರಿ, ಹಾಗೂ ಆಕಾಂಕ್ಷಿಗಳಾದ ದಿವಾಕರ್ ಕುಂದರ್, ಪ್ರಖ್ಯಾತ್ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ನಗರಸಭಾ ಸದಸ್ಯರು, ಪಂಚಾಯತ್ ಸದಸ್ಯರು ಹಾಗೂ ರಾಜ್ಯ, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಯ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love