
ಉಡುಪಿ: ಹಾಡುಹಗಲೇ ವಕೀಲರ ಮನೆಯಿಂದ ಲಕ್ಷಾಂತರ ಮೌಲ್ಯದ ನಗ-ನಗದು ಕಳವು
ಉಡುಪಿ: ಹಾಡುಹಗಲೇ ವಕೀಲರೊಬ್ಬರ ಮನೆಗೆ ಕಳ್ಳರು ನುಗ್ಗಿ ಸುಮಾರು 25 ಲಕ್ಷರೂ ಮೌಲ್ಯದ ನಗ ನಗದು ಕಳ್ಳತನ ಮಾಡಿದ ಘಟನೆ ಜು. 19 ರಂದು ನಗರದ ಕೋರ್ಟ್ ಹಿಂಬದಿ ರಸ್ತೆಯಲ್ಲಿ ನಡೆದಿದೆ.
ಉಡುಪಿಯ ವಕೀಲರಾದ ವಾಣಿ ವಿ ರಾವ್ ಎಂಬವರ ಮನೆಗೆ ಜುಲೈ 19 ರಂದು ರಂದು ಬೆಳಿಗ್ಗೆ 10:45 ಗಂಟೆಯಿಂದ 14:10 ಗಂಟೆ ಮಧ್ಯಾವಧಿಯಲ್ಲಿ ಯಾರೋ ಕಳ್ಳರು ಮನೆಯ ಒಳಪ್ರವೇಶಿಸಿ, ಬೆಡ್ರೂಂನಲ್ಲಿದ್ದ ಕಬ್ಬಿಣದ ಕಪಾಟಿನ ಲಾಕರ್ನಲ್ಲಿ ಇರಿಸಿದ್ದ ಬೂದು ಬಣ್ಣದ ಪರ್ಸ್ ನಲ್ಲಿದ್ದ ರೂಪಾಯಿ 45,000/- ನಗದು ಮತ್ತು ಕಪ್ಪು ಬಣ್ಣದ ವ್ಯಾನಿಟಿ ಬ್ಯಾಗ್ನಲ್ಲಿರಿಸಿದ್ದ 5 ಪವನ್ ತೂಕದ ಪಚ್ಚೆಕಲ್ಲು ಇರುವ ಚಿನ್ನದ ಬ್ರೇಸ್ಲೇಟ್, 6 ಪವನ್ ತೂಕದ ಮುತ್ತಿನ ಬಳೆ-2, 5½ ಪವನ್ ತೂಕದ ಚಿನ್ನದ ಖಡಗ ಬಳೆಗಳು-2, 6 ಪವನ್ ತೂಕದ ಚಿನ್ನದ ಸರ ಮತ್ತು 1 ಪವನ್ ತೂಕದ ಪೆಂಡೆಂಟ್, 6 ಪವನ್ ತೂಕದ ಮಲ್ಲಿಗೆ ಮೊಗ್ಗು ಚಿನ್ನದ ಸರ, 1½ ಪವನ್ ತೂಕದ ಚಿನ್ನದ ಸರ ಮತ್ತು ನೀಲಿ ಹರಳಿನ ಪೆಂಡೆಂಟ್, ನೀಲಿ ಕಲ್ಲಿನ ಬೆಂಡೋಲೆ ಮತ್ತು ಕರಮಣಿ ಹರಳಿನ ಬೆಂಡೋಲೆ – 2 ಜೊತೆ, ಜುಮ್ಕಿ ಮತ್ತು ಮಾಟಿ- 2 ಜೊತೆ, 1 ಪವನ್ ತೂಕದ ಚಿನ್ನದ ತುಂಡುಗಳು ಮತ್ತು ಕೊಕ್ಕೆ, 3 ಪವನ್ ತೂಕದ ಚಿನ್ನದ ನೆಕ್ಲೇಸ್, 2½ ಪವನ್ ತೂಕದ ಗ್ರೇನೆಟ್ ಹರಳಿನ ನೆಕ್ಲೇಸ್ ಮತ್ತು 3 ಪವನ್ನ ಗ್ರೇನೆಟ್ ಹರಳಿನ ಬಳೆ, 4 ಗ್ರಾಮ್ ನ ಚಿನ್ನದ ನಾಣ್ಯ-6 , 4 ರೇಷ್ಮೆ ಸೀರೆಗಳು ಮತ್ತು 1 ಸಾಧಾರಣ ಸೀರೆಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಸೊತ್ತುಗಳ ಒಟ್ಟು ಮೌಲ್ಯ ರೂಪಾಯಿ 25,00,000/- ಆಗಿದೆ
ಈ ಬಗ್ಗೆ ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.