ಎ.16: ಉಡುಪಿ – ಮಂಗಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಸಿದ್ದರಾಮಯ್ಯರಿಂದ ಪ್ರಚಾರ

Spread the love

ಎ.16: ಉಡುಪಿ – ಮಂಗಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಸಿದ್ದರಾಮಯ್ಯರಿಂದ ಪ್ರಚಾರ

ಉಡುಪಿ: ಲೋಕಸಭಾ ಚುನಾವಣಾ ಪ್ರಯುಕ್ತ ಎಪ್ರಿಲ್ 16 ರಂದು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಡುಪಿ-ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ

ಮಂಗಳವಾರ ಬೆಳಿಗ್ಗೆ 10.50ಕ್ಕೆ ಶಿವಮೊಗ್ಗದಿಂದ ಆದಿ ಉಡುಪಿ ಹೆಲಿ ಪ್ಯಾಡ್ ಗೆ ಆಗಮಿಸುವ ಸಿದ್ದರಾಮಯ್ಯ ಅವರು ಅಂಬಲಪಾಡಿ ಬೈಪಾಸ್ ಬಳಿ ಆಯೋಜಿಸಿರುವ ಚುನಾವಣಾ ಪ್ರಚಾರ ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸುವರು.

ಸಂಜೆ 4.05ಕ್ಕೆ ಹೆಲಿಕಾಪ್ಟರ್ ಮೂಲಕ ಆದಿ ಉಡುಪಿಯಿಂದ ಪುತ್ತೂರು ಎನ್ ಆರ್ ಸಿಸಿ ಹೆಲಿಪ್ಯಾಡ್ ಗೆ ಆಗಮಿಸಿ ಪುತ್ತೂರು ಕಿಲ್ಲೆ ಮೈದಾನದಲ್ಲಿ ಆಯೋಜಿಸಿರುವ ಚುನಾವಣಾ ಪ್ರಚಾರ ಸಭೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ.


Spread the love