ಏಪ್ರಿಲ್ 10 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಪ್ರವಾಸ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಏಪ್ರಿಲ್ 10 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಏಪ್ರಿಲ್ 10 ರಂದು ಬೆಳಿಗ್ಗೆ 9 – ಮಂಗಳೂರು ವಿಮಾನ ನಿಲ್ದಾಣ ಆಗಮನ, 9:30- ನಗರದ ಟಿ.ಎಂ.ಎ ಪೈ ಸಭಾಂಗಣದಲ್ಲಿ ಮಂಗಳೂರು ಫಿಸಿಕಾನ್ -2026 ಉದ್ಘಾಟನಾ ಕಾರ್ಯಕ್ರಮ, 10:40- ಲೇಡಿಗೋಶನ್ ಆಸ್ಪತ್ರೆಯಲ್ಲಿ ಪವರ್ ಗ್ರಿಡ್ ಕಾರ್ಪೊರೇಶನ್ ವತಿಯಿಂದ ವೈದ್ಯಕೀಯ ಉಪಕರಣಗಳ ಹಸ್ತಾಂತರ ಕಾರ್ಯಕ್ರಮ, 11:15 ರಿಂದ ಮಧ್ಯಾಹ್ನ 3 ರವರೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಭೆಗಳು, ಸಂಜೆ 4- ಶಕ್ತಿನಗರ ಕಲಾಂಗಣದಲ್ಲಿ ಪ್ರಥಮ ವಿಶ್ವಕೊಂಕಣಿ ಮಹಾ ಮಹಾ ಸಮಾವೇಶ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ, 5:30 ಸಕ್ರ್ಯೂಟ್ ಹೌಸ್ನಲ್ಲಿ ಸಾರ್ವಜನಿಕರ ಭೇಟಿ, 9:30- ಸಚಿವರು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.
