Home Mangalorean News Kannada News ಕೆ.ಜಿ.ಎಫ್. ಬಿಡುಗಡೆ ಹಿನ್ನೆಲೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ನಟ ಯಶ್​ ಭೇಟಿ

ಕೆ.ಜಿ.ಎಫ್. ಬಿಡುಗಡೆ ಹಿನ್ನೆಲೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ನಟ ಯಶ್​ ಭೇಟಿ

Spread the love

ಕೆ.ಜಿ.ಎಫ್. ಬಿಡುಗಡೆ ಹಿನ್ನೆಲೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ನಟ ಯಶ್​ ಭೇಟಿ

ಉಡುಪಿ: ಸ್ಯಾಂಡಲ್​ವುಡ್​ನ ಬಹುನಿರೀಕ್ಷಿತ ಕೆ.ಜಿ.ಎಫ್. ಸಿನಿಮಾ ಬಿಡುಗಡೆ ಹಿನ್ನೆಲೆಯಲ್ಲಿ ರಾಕಿಂಗ್​ ಸ್ಟಾರ್​ ಯಶ್​ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಭಾನುವಾರ ಹೆಲಿಕಾಪ್ಟರ್​ ಮೂಲಕ ದೇವಸ್ಥಾನಕ್ಕೆ ಭೇಟಿ ನೀಡಿದ ಯಶ್​ ಅವರನ್ನು ದೇವಸ್ಥಾನದ ಮಂಡಳಿ ಸದಸ್ಯರು ಸ್ವಾಗತಿಸಿದರು. ದೇವರ ದರ್ಶನದ ಬಳಿಕ ದೇವಳದ ವತಿಯಿಂದ ವಿಶೇಷ ಗೌರವ ಸಮರ್ಪಣೆ ಮಾಡಲಾಯಿತು.

ಇದೇ ಶುಕ್ರವಾರದಂದು ಕೆ.ಜಿ.ಎಫ್​. ಸಿನಿಮಾ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಟ್ರೇಲರ್ ಹಾಗೂ ಲಿರಿಕಲ್​ ವಿಡಿಯೋ ಸಾಂಗ್​ ಭಾರಿ ಸದ್ದು ಮಾಡುತ್ತಿದೆ. ಕೆ.ಜಿ.ಎಫ್​. ಯಶ್​ ವೃತ್ತಿ ಜೀವನದ ವಿಶೇಷ ಸಿನಿಮಾ ಆಗಿದ್ದು, ಬರೋಬ್ಬರಿ 5 ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಉಗ್ರಂ ಖ್ಯಾತಿಯ ಪ್ರಶಾಂತ್​ ನೀಲ್​ ಅವರು ಕೆ.ಜಿ.ಎಫ್​. ಚಿತ್ರದ ಕತೆ ಬರೆದು ನಿರ್ದೇಶಿಸಿದ್ದಾರೆ.


Spread the love

Exit mobile version