ಕೊರಗ ಸಮುದಾಯದ ವಿಕಲಚೇತನ ಉಪನ್ಯಾಸಕ ದಿನಕರ ಕೆಂಜೂರು ರವರಿಗೆ ಡಾಕ್ಟರೇಟ್ ಪದವಿ

Spread the love

ಕೊರಗ ಸಮುದಾಯದ ವಿಕಲಚೇತನ ಉಪನ್ಯಾಸಕ ದಿನಕರ ಕೆಂಜೂರು ರವರಿಗೆ ಡಾಕ್ಟರೇಟ್ ಪದವಿ

ಉಡುಪಿ: ಜಿಲ್ಲೆಯ ಬಹ್ಮಾವರ ತಾಲ್ಲೂಕಿನ ಕೆಂಜೂರು ಗ್ರಾಮದ ಕಲ್ಲುಗುಡ್ಡೆಯ ದಿನಕರ ಕೆಂಜೂರು ಇವರು ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರು ಹಾಗು ಕುಲಪತಿಗಳು ಪ್ರೊ. ಪಿ.ಎಸ್. ಯಡಪಡಿತ್ತಾಯ ರವರ ಮಾರ್ಗದರ್ಶನದಲ್ಲಿ ಮಂಡಿಸಿದ “ನಾಲೇಜ್ ಮ್ಯಾನೇಜ್ಮೆಂಟ್ ಪಾಲಿಸೀಸ್ ಎಂಡ್ ಪ್ರಾಕ್ಟೀಸಸ್: ಎ ಸ್ಟಡಿ ವಿದ್ ರೆಪರೆನ್ಸ್ ಟು ಕಂಪ್ಯೂಟರ್ ಸ್ವಾಪ್ಟವೇರ್ ಎಂಡ್ ಸರ್ವಿಸಸ್ ಕಂಪೆನೀಸ್ ಇನ್ ಕರ್ನಾಟಕ” ಎಂಬ ವಿಷಯದ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಕರ್ನಾಟಕ ರಾಜ್ಯದ ಅಂಚೀಕೃತ ಬುಡಕಟ್ಟು ಸಮುದಾಯವಾದ ಕೊರಗ ಸಮುದಾಯದಲ್ಲಿ ಡಾಕ್ಟರೇಟ್ ಪಡೆದ ಮೂರನೇಯವರಾಗಿದ್ದು ವಿಕಲಚೇತನ ವ್ಯಕ್ತಿಯಾಗಿರುತ್ತಾರೆ. ಇವರು ಸುಕ್ರ ಕೊರಗ ಕೆಂಜೂರು ಮತ್ತು ದಿ. ಶಾಂತ ಕೆಂಜೂರು ರವರ ಪುತ್ರರಾಗಿರುತ್ತಾರೆ.

ಡಾ. ದಿನಕರ ಕೆಂಜೂರು ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.


Spread the love