ಗೃಹಲಕ್ಷ್ಮಿ‌ ಯೋಜನೆ: ಅರ್ಜಿ ಸ್ವೀಕಾರ ನಾಲ್ಕೈದು ದಿನ ಮುಂದಕ್ಕೆ- ಲಕ್ಷ್ಮೀ ಹೆಬ್ಬಾಳ್ಕರ್

Spread the love

ಗೃಹಲಕ್ಷ್ಮಿ‌ ಯೋಜನೆ: ಅರ್ಜಿ ಸ್ವೀಕಾರ ನಾಲ್ಕೈದು ದಿನ ಮುಂದಕ್ಕೆ- ಲಕ್ಷ್ಮೀ ಹೆಬ್ಬಾಳ್ಕರ್
 

ಬೆಂಗಳೂರು: ಗೃಹಲಕ್ಷ್ಮಿ‌ ಯೋಜನೆಯ ಅರ್ಜಿ ಸ್ವೀಕಾರ ಮುಂದಕ್ಕೆ ಹೋಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಗೃಹಲಕ್ಷ್ಮೀ ಅರ್ಜಿ ಬಿಡುಗಡೆ ಕಾರ್ಯಕ್ರಮ ನಾಲ್ಕೈದು ದಿನ ಮುಂದಕ್ಕೆ ಹಾಕಲಾಗಿದೆ. ಬಹಳ ಒತ್ತಡ ಬೀಳಬಹುದು ಎಂದು ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ ಎಂದು ಅವರು ಹೇಳಿದರು.

ಬಾಪೂಜಿ ಕೇಂದ್ರ, ನಾಡ ಕಚೇರಿಯಲ್ಲಿ ಕೂಡ ಅರ್ಜಿ ಸ್ವೀಕಾರಕ್ಕೆ ಅವಕಾಶವಿದೆ. ಒಂದು ಮೊಬೈಲ್ ಅಪ್ಲಿಕೇಶನ್ ಸಿದ್ಧಪಡಿಸಲಾಗುತ್ತಿದೆ. ಒಂದು ಅರ್ಜಿ ತುಂಬಲು 4ರಿಂದ ಆರು ನಿಮಿಷ ಆಗಲಿದೆ. ಹೀಗಾಗಿ ಮಹಿಳೆಯರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ತಯಾರಿಗಾಗಿ ಮುಂದಕ್ಕೆ ಹಾಕಲಾಗಿದೆ ಎಂದು ಸ್ಪಷ್ಟಪಡಿಸಿದರು.

ಇ-ಆಡಳಿತದವರು ಮೊಬೈಲ್ ಅಪ್ಲಿಕೇಶನ್‌ಗೆ ಎರಡು ದಿನ ಕೇಳಿದ್ದರು, ಬಳಿಕ, ನಾಲ್ಕು ದಿನ‌ ಕಾಲಾವಕಾಶ ಕೇಳಿದ್ದಾರೆ. ಈ ಕುರಿತಂತೆ, ಬಾಪೂಜಿ ಕೇಂದ್ರ, ನಾಡ ಕಚೇರಿ ಸಿಬ್ಬಂದಿಗೆ ತರಬೇತಿ ಕೊಡಬೇಕಾಗುತ್ತದೆ ಎಂದು ಹೆಬ್ಬಾಳ್ಕರ್ ತಿಳಿಸಿದರು.


Spread the love