Home Mangalorean News Kannada News ಜುಲೈ 12 ರಂದು ನಂದಿನಿ ತೃಪ್ತಿ ಹಾಲು ಉಚಿತ

ಜುಲೈ 12 ರಂದು ನಂದಿನಿ ತೃಪ್ತಿ ಹಾಲು ಉಚಿತ

Spread the love

ಜುಲೈ 12 ರಂದು ನಂದಿನಿ ತೃಪ್ತಿ ಹಾಲು ಉಚಿತ

ಉಡುಪಿ : ದಕ್ಷಿಣ ಕನ್ನಡ ಹಾಲು ಒಕ್ಕೂಟದ ಹಾಲು ಸಂಗ್ರಹಣೆ ಹೆಚ್ಚಾಗಿದ್ದು, ಹೆಚ್ಚುವರಿಯಾಗಿ ಸಂಗ್ರಹವಾಗುತ್ತಿರುವ ಹಾಲಿನ ಪ್ರಯೋಜನವನ್ನು ನಂದಿನಿ ಗ್ರಾಹಕರಿಗೆ ವಿಸ್ತರಿಸುವ ಉದ್ದೇಶದಿಂದ , ಜುಲೈ 12 ರಂದು, ಉಡುಪಿ ಮತ್ತು ಮಂಗಳೂರು ಜಿಲ್ಲೆಯಲ್ಲಿ ಗ್ರಾಹಕರು ಖರೀದಿಸುವ ಪ್ರತಿ ಪ್ಯಾಕೆಟ್ ( 500 ಮಿಲೀ, 1 ಲೀ, 6 ಲೀ ) ನಂದಿನಿ ಹಾಲಿನ ಪ್ಯಾಕೇಟ್ ನೊಂದಿಗೆ , 90 ದಿನದಷ್ಟು ದೀರ್ಘಕಾಲ ಬಾಳಕೆ ಬರುವ , ನಂದಿನಿ ತೃಪ್ತಿ ಹಾಲಿನ ಪ್ಯಾಕೆಟ್ ನ್ನು (180 ಮಿ.ಲೀ) ಉಚಿತವಾಗಿ ನೀಡಲು ಗ್ರಾಹಕ ಸ್ನೇಹಿ ಯೋಜನೆ ರೂಪಿಸಿದ್ದು, ನಂದಿನಿ ಗ್ರಾಹಕರಿಗೆ ಅಂದಾಜು 62 ಲಕ್ಷ ರೂ ಮೌಲ್ಯದ ತೃಪ್ತಿ ಹಾಲನ್ನು ಉಚಿತವಾಗಿ ನೀಡಲಾಗುವುದು ಎಂದು ದ.ಕನ್ನಡ ಹಾಲು ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ತಿಳಿಸಿದ್ದಾರೆ. ಅವರು ಬುಧವಾರ, ಮಣಿಪಾಲದ ಕೆಎಂಎಫ್ ಡೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಜುಲೈ 12 ರಂದು ನೀಡಲಾಗುವ ಉಚಿತ ತೃಪ್ತಿ ಹಾಲನ್ನು ಮನೆ ಮನೆಗೆ ವಿತರಿಸುವವರಿಗೂ ಸಹ ಗ್ರಾಹಕರಿಗೆ ವಿತರಿಸುವಂತೆ ಸೂಚನೆ ನೀಡಲಾಗಿದೆ, ಎಲ್ಲಾ ಡೀಲರ್ ಗಳಿಗೆ ಸಹ ಉಚಿತ ಹಾಲು ವಿತರಣೆ ಕುರಿತಂತೆ ಮಾಹಿತಿ ನೀಡಲಾಗಿದ್ದು, ಅಗತ್ಯ ವಿರುವ ಒಟ್ಟು 6.5 ಲಕ್ಷ ನಂದಿನಿ ತೃಪ್ತಿ ಹಾಲಿನ ಪ್ಯಾಕೆಟ್ ಗಳನ್ನು ಸಿದ್ದಪಡಿಸಲಾಗಿದ್ದು, ಗ್ರಾಹಕರಿಗೆ ಸಮರ್ಪಕ ರೀತಿಯಲ್ಲಿ ವಿತರಣೆಯಾಗುವುದನ್ನು ಪರಿಶೀಲಿಸಲು ಉಸ್ತುವಾತಿ ತಂಡಗಳನ್ನು ರಚಿಸಲಾಗಿದೆ, ಗ್ರಾಹಕರಿಗೆ ಯಾವುದೆ ಲೋಪವಾಗದಂತೆ ಎಲ್ಲರಿಗೂ ಪ್ರಯೋಜನ ದೊರಕಿಸಿಕೊಡಲು ಉದ್ದೇಶಿಸಲಾಗಿದೆ, ಹಾಲು ಉತ್ತಮ ಸಮತೋಲಿತ ಆಹಾರವಾಗಿದ್ದು, ಉತ್ತಮ ಆರೋಗ್ಯದ ದೃಷ್ಠಿಯಿಂದ , ಕಲಬೆರಕೆಯಿಲ್ಲದೇ ಅತ್ಯಂತ ಪರಿಶುದ್ದವಾಗಿರುವ ನಂದಿನಿ ಹಾಲನ್ನು ಮಕ್ಕಳಿಂದ ವಯೋ ವೃದ್ದರ ವರೆಗೆ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಬಳಸುವಂತೆ ರವಿರಾಜ್ ಹೆಗ್ಡೆ ಹೇಳಿದರು.

ಉಪ್ಪೂರು ನಲ್ಲಿ ಅಂದಾಜು 100 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 2.50 ಲಕ್ಷ ಲೀ ಸಾಮಥ್ರ್ಯದ ನೂತನ ಡೇರಿ ಸ್ಥಾವರ ಈ ವಷಾಂತ್ಯದ ವೇಳೆಗೆ ಉದ್ಘಾಟನೆಯಾಗಲಿದ್ದು, ಸಂಪೂರ್ಣ ಆಟೋಮೇಟಿಕ್ ವ್ಯವಸ್ಥೆಯಿಂದ ಕೂಡಿರಲಿದೆ ಎಂದು ಅಧ್ಯಕ್ಷರು ಹೇಳಿದರು.

ಪತ್ರಿಕಾಗೊಷ್ಠಿಯಲ್ಲಿ ಒಕ್ಕೂಟದ ಅಧ್ಯಕ್ಷರಾದ, ಕಾಪು ದಿವಾಕರ ಶೆಟ್ಟಿ, ಸೂರ್ಯ ಶೆಟ್ಟಿ, ಹದ್ದೂರ್ ರಾಜೀವ ಶೆಟ್ಟಿ, ಒಕ್ಕೂಟದ ವ್ಯವಸ್ಥಾಪಕ ಡಾ.ಬಿ.ವಿ ಸತ್ಯ ನಾರಾಯಣ್, ಪ್ರಭಾರ ವ್ಯವಸ್ಥಾಪಕ ಜಯದೇವಪ್ಪ ಕೆ ಹಾಗೂ ಮಣಿಪಾಲ ಘಟಕದ ವ್ಯವಸ್ಥಾಪಕ ಲಕ್ಕಪ್ಪ ಉಪಸ್ಥಿತರಿದ್ದರು.


Spread the love

Exit mobile version