ಡಿ. 3: ಮುಖ್ಯಮಂತ್ರಿ ಸಿದ್ದರಾಮಯ್ಯ ದಕ ಜಿಲ್ಲಾ ಪ್ರವಾಸ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 3 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 11 – ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 11:40- ಕೊಣಾಜೆ ಮಂಗಳಗಂಗೋತ್ರಿಯಲ್ಲಿ ಶಿವಗಿರಿ ಮಠ ವರ್ಕಲಾ ಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಆಯೋಜಿಸಿರುವ ಶತಮಾನದ ಪ್ರಸ್ತಾನ ಶ್ರೀ ನಾರಾಯಣ ಗುರು- ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ, ಶ್ರೀ ಗುರುವಿನ ಮಹಾ ಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ ಶತಮಾನೋತ್ಸವ, ಯತಿ ಪೂಜೆ ಉದ್ಘಾಟನಾ ಸಮಾರಂಭ.
ಮಧ್ಯಾಹ್ನ 12:30 – ಪೇಸ್, ಜ್ಞಾನ ನಗರ, ಕೊಣಾಜೆ ವತಿಯಿಂದ ಆಯೋಜಿಸಿರುವ ಪೇಸ್ ಮತ್ತು ಎ.ಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ, ಪೇಸ್ ಟ್ರೈಡ್ ಪಾರ್ಕ್ ಮತ್ತು ಪೇಸ್ ಸ್ಪೋಟ್ರ್ಸ್ ಅರೆನಾ ಇದರ ಶಿಲಾನ್ಯಾಸ ಹಾಗೂ ಪೇಸ್ಕೇಶರ್ಸ್ ಸಮುದಾಯ ಸೇವಾ ಯೋಜನೆಗಳು ಉದ್ಘಾಟನಾ ಸಮಾರಂಭ, ಮಧ್ಯಾಹ್ನ 1:15- ನಗರದ ಸಕ್ರ್ಯೂಟ್ ಹೌಸ್ನೋಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ವಕೀಲರ ಬಾರ್ ಅಸೋಸಿಯೇಷನ್ರಿವರ ಭೇಟಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ, ಸಂಜೆ 4:30 – ವಿಶೇಷ ವಿಮಾನದ ಮೂಲಕ ಮುಖ್ಯಮಂತ್ರಿಗಳು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.
