
Spread the love
ಪಡುಬಿದ್ರಿ: ಬೈಕ್ – ಬಸ್ ಅಪಘಾತ: ಸವಾರ ಮೃತ್ಯು
ಉಡುಪಿ: ಬೈಕ್ – ಬಸ್ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸಾವನಪ್ಪಿದ ಘಟನೆ ನಂದಿಕೂರು ಮುದರಂಗಡಿ ಜಂಕ್ಷನ್ ನಲ್ಲಿ ಬುಧವಾರ ಮುಂಜಾನೆ ನಡೆದಿದೆ.
ಮೃತ ವ್ಯಕ್ತಿಯನ್ನು ಕಾರ್ಕಳ ಅಜೆಕಾರು ನಿವಾಸಿ ಅಶ್ವಿತ್ ಶೆಟ್ಟಿ (22) ಎಂದು ಗುರುತಿಸಲಾಗಿದೆ.
ಬೈಕ್ ಸವಾರ ಯೂ ಟ್ಯೂಬ್ ಬ್ಲಾಗರ್ ಆಗಿದ್ದು, ಮಂಗಳೂರಿಗೆ ಬೈಕ್ ನಲ್ಲಿ ತೆರಳುತ್ತಿದ್ದು, ನಂದಿಕೂರ್ ಬಳಿ ನಿಂತಿದ್ದ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬಂದ ಕಾರ್ಕಳದತ್ತ ತೆರಳುತಿದ್ದ ವೇಗದೂತ ಬಸ್ ಮುಂಭಾಗಕ್ಕೆ ಡಿಕ್ಕಿಯಾಗಿದೆ. ಗುದ್ದಿದ ರಭಸಕ್ಕೆ ಗಂಭೀರ ಗಾಯಗೊಂಡ ಅವರು ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ.
Spread the love