ಪಾನಿಪೂರಿ ವ್ಯಾಪಾರಿ ಖಾತೆಗೆ ಕನ್ನ ಹಾಕಿದವನ ಬಂಧನ

Spread the love

ಪಾನಿಪೂರಿ ವ್ಯಾಪಾರಿ ಖಾತೆಗೆ ಕನ್ನ ಹಾಕಿದವನ ಬಂಧನ

ಚಾಮರಾಜನಗರ: ಪಾನಿಪೂರಿ ತಿಂದಿದ್ದಕ್ಕದೆ, ಪಾನಿಪೂರಿ ವ್ಯಾಪಾರಿ ಖಾತೆಗೆ ಕನ್ನ ಹಾಕಿದ್ದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.

ಬೆಂಗಳೂರು ಮೂಲದ ವಿಶಾಲ್ (19) ಬಂಧಿತ ಯುವಕ.‌ ಸ್ನೇಹಿತರ ಜೊತೆ ಕೊಳ್ಳೇಗಾಲಕ್ಕೆ ಬಂದಿದ್ದ ಈತ ತನ್ನ ಬುದ್ಧಿವಂತಿಕೆ ತೋರಿ ವಂಚಿಸಿ ಕೊನೆಗೆ ಜೈಲುಪಾಲಾಗಿದ್ದಾನೆ. ಗೆಳೆಯರ ಜೊತೆ ಕೊಳ್ಳೇಗಾಲಕ್ಕೆ ಬಂದಿದ್ದ ಆರೋಪಿ ವಿಶಾಲ್ ಕೊಳ್ಳೇಗಾಲದ ಡಾ ಬಿ ಆರ್ ಅಂಬೇಡ್ಕರ್ ರಸ್ತೆಯಲ್ಲಿನ‌ ಲೋಕೇಶ್ ಎಂಬವರ ಪಾನಿಪೂರಿ ಅಂಗಡಿಗೆ ತೆರಳಿ ಸ್ನೇಹಿತರ ಜೊತೆ ಮೂರು ಪ್ಲೇಟ್ ಪಾನಿಪೂರಿ ತಿಂದಿದ್ದಾನೆ‌. ಹಣವನ್ನು ಫೋನ್ ಪೇ ಮಾಡುವುದಾಗಿ ಹೇಳಿ ವ್ಯಾಪಾರಿ ಫೋನ್ ಪಡೆದು ಬೇರೊಬ್ಬನಿಗೆ ಕರೆ ಮಾಡಿದ್ದಾನೆ. ಆತ ದುಡ್ಡು ಕಳುಹಿಸಿದ್ದು ಒಮ್ಮೆ ಚೆಕ್ ಮಾಡಿ ಎಂದು ಹೇಳಿ ವ್ಯಾಪಾರಿ ಫೋನ್ ಪೇ ತೆರೆಯುವಾಗ ಪಾಸ್ ವರ್ಡ್ ನೋಡಿಕೊಂಡಿದ್ದಾನೆ.

ಸ್ವಲ್ಪ ಸಮಯದ ಬಳಿಕ ನಿಮ್ಮ ಫೋನ್ ನಲ್ಲಿ ಸರ್ವರ್ ಸಮಸ್ಯೆ ಇದೆ. ಪರಿಶೀಲಿಸುವುದಾಗಿ ಫೋನ್ ಪಡೆದು 30 ಸಾವಿರ ರೂ.ವನ್ನು ತನ್ನ ಖಾತೆಗೆ ಕಳುಹಿಸಿಕೊಂಡು ಪಾನಿಪೂರಿ ಹಣ 120 ರೂ. ಕಳುಹಿಸಿ ವಂಚಿಸಿದ್ದನು. ಈ ಬಗ್ಗೆ ವ್ಯಾಪಾರಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಚಾಮರಾಜನಗರ ಸಿಇಎನ್ ಠಾಣೆ ಪಿಐ ಆನಂದ್ ಮತ್ತು ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಂಡಿದ್ದಾರೆ.


Spread the love