
ಪುತ್ತೂರಿಗೆ ಗೃಹ ಸಚಿವ ಅಮಿತ್ ಷಾ ಭೇಟಿ – ವಾಹನ ಸಂಚಾರದಲ್ಲಿ ಬದಲಿ ವ್ಯವಸ್ಥೆ
ಪುತ್ತೂರು: ದೇಶದ ಗೃಹ ಸಚಿವರಾದ ಅಮಿತ್ ಷಾ ಅವರು ಫೆಬ್ರವರಿ 11 ರಂದು ಪುತ್ತೂರು ನಗರದ ತೆಂಕಿಲ ವಿವೇಕಾನಂದ ಶಾಲೆ ಮೈದಾನಕ್ಕೆ ಕ್ಯಾಂಪ್ಕೊ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವಲು ಆಗಮಿಸುವ ನಿಟ್ಟಿನಲ್ಲಿ ವಾಹನ ಸಂಚಾರದಲ್ಲಿ ಬದಲಿ ವ್ಯವಸ್ಥೆಯನ್ನು ಮಾಡಿ ಆದೇಶಿಸಲಾಗಿದೆ.
1. ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಲಿನೆಟ್ ಜಂಕ್ಷನ್ ನಿಂದ – ಮುಕ್ಕಂಪಾಡಿಯವರೆಗೂ ಸದ್ರಿ ರಸ್ತೆಯಲ್ಲಿಮಧ್ಯಾಹ್ನ 2.00 ಗಂಟೆಯಿಂದ ಸಂಜೆ 5.30 ಗಂಟೆಯವರೆಗೂ ಯಾವುದೇ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸದಂತೆ, ವಾಹನ ಸಂಚಾರ ನಿಷೇಧ
2. ಸುಗಮ ಸಂಚಾರದ ದೃಷ್ಟಿಯಿಂದ ಆ ಸಮಯದಲ್ಲಿ ಮಂಗಳೂರು ಕಡೆಯಿಂದ – ಸುಳ್ಯ ಮತ್ತು ಮಡಿಕೇರಿ ಕಡೆ ಹೋಗುವ ವಾಹನಗಳು ಲಿನಟ್ ಜಂಕ್ಷನ್ – ಬೊಳುವಾರು ಜಂಕ್ಷನ್ – ದರ್ಬೆ – ಪುರುಷರಕಟ್ಟೆ – ಪಂಜಳ ಪರ್ಪುಂಜ ಮಾರ್ಗವನ್ನು ಬಳಸುವುದು.
3. ಮಡಿಕೇರಿ – ಸುಳ್ಯ ಕಡೆಯಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳು ಪರ್ಪುಂಜ – ಪಂಜಳ – – ಪುರುಷರಕಟ್ಟೆ – ದರ್ಬೆ – ಬೊಳುವಾರು ಜಂಕ್ಷನ್ – ಲಿನೆಟ್ ಜಂಕ್ಷನ್ ಮಾರ್ಗವನ್ನು ಬಳಸುವುದು,
4. ಸದ್ರಿ ಕಾರ್ಯಕ್ರಮಕ್ಕೆ ಆಗಮಿಸುವ ಬಸ್ಸುಗಳನ್ನು ನಿಲ್ಲಿಸಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ಆವರಣದಲ್ಲಿ ಹಾಗೂ ಸದ್ರಿ ಕಾರ್ಯಕ್ರಮಕ್ಕೆ ಸುಳ್ಯ ಕಡೆಯಿಂದ ಬರುವ ಬಸ್ಸುಗಳನ್ನು ಮುಕ್ತಾಂವಾಡಿಯ ಸಾಂತ್ಯಂ ಚರ್ಚ್ ಮುಂಭಾಗ ಇರುವ ಖಾಲಿ ಮೈದಾನದಲ್ಲಿ ನಿಲ್ಲಿಸಲು ಹಾಗೂ ಕಾರುಗಳನ್ನು ನಗರದ ಕಿಲ್ಲಿ ಮೈದಾನ, ಹಾಗೂ ವಿಐಪಿ ವಾಹನಗಳನ್ನು ಗೌಡ ಸಮುದಾಯ ಭವನ ಮತ್ತು ಅದರ ಪಕ್ಕ ಇರುವ ಜಾಗದಲ್ಲಿ, ದರ್ಶನ್ ಹಾಲ್ ಮತ್ತು ಪಕ್ಕ ಖಾಲಿ ಜಾಗಗಳಲ್ಲಿ ಪಾರ್ಕಿಂಗ್ ಮಾಡುವುದು.