
Spread the love
ಪುತ್ತೂರು: ಕಾರು ಅಪಘಾತ: ಗ್ರಾ.ಪಂ. ಸದಸ್ಯ ಸಾವು
ಪುತ್ತೂರು: ಸಂಟ್ಯಾರು ಬೆಟ್ಟಂಪಾಡಿ ರಸ್ತೆಯ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಕಾರು ಅಪಘಾತ ಸಂಭವಿಸಿದ್ದು, ಕಾರು ಎರಡು ವಿದ್ಯುತ್ ಕಂಬಕ್ಕೆ ಗುದ್ದಿ 50 ಅಡಿ ಆಳದ ತೋಟಕ್ಕೆ ಬಿದ್ದಿದೆ.
ಫಾರ್ಡ್ ಫೀಗೋ ಕಾರು ಬೆಟ್ಟಂಪಾಡಿ ಕಡೆ ಹೋಗುತ್ತಿದ್ದಾಗ ಎರಡು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ತೋಟಕ್ಕೆ ಉರುಳಿದೆ.
ಅಪಘಾತದಲ್ಲಿ ನಿಡ್ಪಳ್ಳಿ ಗ್ರಾ.ಪಂ.ನ ಬಿಜೆಪಿ ಬೆಂಬಲಿತ ಸದಸ್ಯ ಮುರಳೀಧರ್ ಭಟ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬೆಟ್ಟಂಪಾಡಿಯ ದಿಲೀಪ್ ಕುಮಾರ್ರಾವ್, ಶಶಿಕುಮಾರ್, ನವನೀತ್ ಅವರು ಕಾರಿನಲ್ಲಿದ್ದರು.
Spread the love