Home Mangalorean News Kannada News ಬಂಟ್ವಾಳ: ರಸ್ತೆ ಬದಿಯ ಹೊಂಡದಲ್ಲಿ ಯುವಕನ ಮೃತದೇಹ ಪತ್ತೆ

ಬಂಟ್ವಾಳ: ರಸ್ತೆ ಬದಿಯ ಹೊಂಡದಲ್ಲಿ ಯುವಕನ ಮೃತದೇಹ ಪತ್ತೆ

Spread the love

ಬಂಟ್ವಾಳ: ರಸ್ತೆ ಬದಿಯ ಹೊಂಡದಲ್ಲಿ ಯುವಕನ ಮೃತದೇಹ ಪತ್ತೆ

ಬಂಟ್ವಾಳ : ನಾಪತ್ತೆಯಾಗಿದ್ದ ಯುವಕನ ಮೃತದೇಹ ರಸ್ತೆ ಬದಿಯ ಹೊಂಡದಲ್ಲಿ ಸೋಮವಾರ ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು ಅಮ್ಮುಂಜೆ ಗ್ರಾಮದ ಬೆಂಜನಪದವು ನಿವಾಸಿ ಜನಾರ್ದನ ಪೂಜಾರಿ ಅವರ ಪುತ್ರ ಸಾಗರ್ (28) ಎಂದು ಗುರುತಿಸಲಾಗಿದೆ.

ಪೈಟಿಂಗ್ ಕೆಲಸ ಮಾಡಿಕೊಂಡಿದ್ದ ಸಾಗರ್ ಜೂ.14ರಂದು ತನ್ನ ಪತ್ನಿ ಹಾಗೂ ಮಗುವಿನೊಂದಿಗೆ ಬಿ.ಸಿ.ರೋಡಿಗೆ ಔಷಧಿ ತರಲೆಂದು ಅಟೋ ರಿಕ್ಷಾದಲ್ಲಿ ತೆರಳಿದ್ದರು. ವಾಪಾಸು ಬರುವಾಗ ಬೆಂಜನಪದವು ಮೂರು ಮಾರ್ಗ ಎಂಬಲ್ಲಿ ಸಾಗರ್ ಇಳಿದಿದ್ದು, ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಸೋಮವಾರ ಬೆಳಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ವಿದ್ಯಾನಗರ ರಸ್ತೆಯ ಹೈಸ್ಕೂಲ್ ರೋಡ್ ಬಳಿ ಮೃತದೇಹ ಕಂಡುಬಂದಿದ್ದು, ಈ ಬಗ್ಗೆ ಮಾಹಿತಿ ಪಡೆದ ಮೃತರ ತಂದೆ ಜನಾರ್ದನ ಪೂಜಾರಿ ಅವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಸಾಗರ್ ಮೃತದೇಹ ಎಂದು ದೃಢಪಡಿಸಿದ್ದಾರೆ. ಹೊಂಡದಲ್ಲಿ ಬಿದ್ದು ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಅವರು ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Exit mobile version