ಬಂಟ್ವಾಳ| ಸುಳ್ಳು ಸುದ್ದಿ ಪ್ರಸಾರ ಮಾಡಿರುವ ಆರೋಪ:‌ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

Spread the love

ಬಂಟ್ವಾಳ| ಸುಳ್ಳು ಸುದ್ದಿ ಪ್ರಸಾರ ಮಾಡಿರುವ ಆರೋಪ:‌ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ : “ದ.ಕ ಜಿಲ್ಲೆಯಲ್ಲಿ ಮತ್ತೆ ಮುಂದುವರಿದ ತಲವಾರು ದಾಳಿ, ಸಜೀಪದಲ್ಲಿ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಇಬ್ಬರು ಅಮಾಯಕ ಮುಸ್ಲಿಮರ ಮೇಲೆ ದಾಳಿ” ಎಂಬ ತಲೆ ಬರಹವಿರುವ ನ್ಯೂಸ್ ಲಿಂಕ್ ನ ಮೂಲಕ ಸುಳ್ಳು ಸುದ್ದಿ ಪ್ರಸಾರ ಮಾಡಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಜೀಪದಲ್ಲಿ ತಲವಾರು ದಾಳಿ ಎಂಬ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯೊಂದು ವೈರಲ್ ಆಗಿದ್ದು, ಈ ಸುಳ್ಳು ಸುದ್ದಿಗೆ ಮತ್ತು ನನಗೆ ಯಾವುದೇ ಸಂಬಂಧವಿಲ್ಲ ಎಂದು ದೂರುದಾರರು ಪೊಲೀಸರಿಗೆ ಹೇಳಿಕೆ ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.

ಶನಿವಾರ ದಾಖಲಾಗಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ, D TV ಕನ್ನಡ ಎಂಬ ನ್ಯೂಸ್ ವೆಬ್‌ಸೈಟ್ ಲಿಂಕ್ ನಲ್ಲಿ ಸುಳ್ಳು ಸುದ್ದಿಯ ಪ್ರಸಾರದಿಂದ ಸಾರ್ವಜನಿಕರಿಗೆ ಭಯ ಬೀತಿಯನ್ನುಂಟು ಮಾಡಿ, ಸಾರ್ವಜನಿಕ ನೆಮ್ಮದಿಯ ವಿರುದ್ಧ ಅಪರಾಧವೆಸಗಿದ ನ್ಯೂಸ್ ವೆಬ್‌ಸೈಟ್ ವಿರುದ್ಧ ನ್ಯಾಯಾಲಯದಿಂದ ಅನುಮತಿ ಪಡೆದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 75/2025, ಕಲಂ: 240 BNS ರಂತೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಹಮ್ಮದ್ ನೌಶಾದ್ ಎಂಬ ಹೆಸರಿನ ಪೇಸ್ಬುಕ್ ಖಾತೆಯಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿರುವ ಹಿನ್ನೆಲೆಯಲ್ಲಿ, ಪೇಸ್ಬುಕ್ ಖಾತೆಯ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ 76/2025, ಕಲಂ: 240 BNS ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗು ತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments