Home Mangalorean News Kannada News ಬಿಜೆಪಿಗರು ಪೊಲೀಸರ ಆತ್ಮ ಸ್ಥೈರ್ಯ ಕೆಡಿಸುವ ಕೆಲಸ ಮಾಡಿದ್ದಾರೆ – ಪದ್ಮರಾಜ್

ಬಿಜೆಪಿಗರು ಪೊಲೀಸರ ಆತ್ಮ ಸ್ಥೈರ್ಯ ಕೆಡಿಸುವ ಕೆಲಸ ಮಾಡಿದ್ದಾರೆ – ಪದ್ಮರಾಜ್

Spread the love

ಬಿಜೆಪಿಗರು ಪೊಲೀಸರ ಆತ್ಮ ಸ್ಥೈರ್ಯ ಕೆಡಿಸುವ ಕೆಲಸ ಮಾಡಿದ್ದಾರೆ – ಪದ್ಮರಾಜ್

ಮಂಗಳೂರು: ಜಿಲ್ಲೆಯ ಬಿಜೆಪಿಯವರಿಗೆ ಸಾಮಾನ್ಯ ಜ್ಞಾನವಿದ್ದಲ್ಲಿ ನಾಯಕರನ್ನು ಕರೆಸಿ ಪ್ರಚೋದನೆ ನೀಡುವುದನ್ನು ಬಿಟ್ಟು ಶಾಂತಿ ನೆಲೆಸುವ ಸಂದೇಶ ಸಮಾಜಕ್ಕೆ ನೀಡುವಂತೆ ವಿನಂತಿಸಬೇಕಿತ್ತು. ಆದರೆ ಬಿಜೆಪಿ ನಾಯಕರು ಇಲ್ಲಿ ಬಂದು ಪೊಲೀಸರ ಆತ್ಮಸ್ಥೈರ್ಯ ಕೆಡಿಸುವ, ಅವರ ಕಾರ್ಯದಲ್ಲಿ ಹಸ್ತಕ್ಷೇಪ ಮಾಡುವ ಕಾರ್ಯ ಮಾಡಿದ್ದಾರೆ ಎಂದು ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ ಆರೋಪಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಭೇಟಿ ನೀಡಿ ಇಲ್ಲಿನ ಸಾಮಾಜಿಕ, ಧಾರ್ಮಿಕ, ಸಂಘ ಸಂಸ್ಥೆಗಳ ಪ್ರಮುಖರನ್ನು, ಅಧಿಕಾರಿಗಳನ್ನು ಭೇಟಿ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿ ಶಾಂತಿ ನೆಲೆಸುವ ನಿಟ್ಟಿನಲ್ಲಿ ಪೂರ್ಣವಾದ ಸ್ವಾತಂತ್ರ್ಯ ಇರುವುದನ್ನು ಖಾತರಿಪಡಿಸಿದ್ದಾರೆ. ಇದು ಬಿಜೆಪಿ ಮತ್ತು ಕಾಂಗ್ರೆಸ್ಗೆ ಇರುವ ವ್ಯತ್ಯಾಸ. ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕು ಎಂದರು.

ಕಾಂಗ್ರೆಸ್ ಹಿಂದಿನಿಂದಲೂ ಅಭಿವೃದ್ಧಿಗೆ ಪ್ರಾಶಸ್ತ್ಯ ನೀಡುವ ಪಕ್ಷ ಎಂದು ಹೇಳಿದ ಅವರು, ಈಗಾಗಲೇ ಕರಾವಳಿ ಜಿಲ್ಲೆಗಳಿಗೆ ಪ್ರತ್ಯೇಕವಾಗಿ ರಾಜ್ಯ ಸರಕಾರ ಘೋಷಿಸಿರುವಂತೆ ವಿಶೇಷ ಕಾರ್ಯಪಡೆಯ ರಚನೆಯಾಗಿದ್ದು, ಜೂ.13ರಂದು ದ.ಕ. ಜಿಲ್ಲೆಯ ಮಂಗಳೂರಿನಲ್ಲಿ ಈ ಕಾರ್ಯಪಡೆಯ ವಿಶೇಷ ಘಟಕ ಆರಂಭಗೊಳ್ಳಲಿದೆ ಎಂದರು.

ದ.ಕ. ಜಿಲ್ಲೆಯ ಸಂಸದರಾಗಿ ಬ್ರಿಜೇಶ್ ಚೌಟ ಒಂದು ವರ್ಷ ಪೂರೈಸಿದ್ದಾರೆ. ಅವರಿಗೆ ಅಭಿವೃದ್ಧಿ ಕಾರ್ಯಗಳಿಗೆ ಇನ್ನೂ ಸಮಯಾವಕಾಶ ಇದೆ. ಚುನಾವಣೆಯಲ್ಲಿ ನನಗೆ ಜಿಲ್ಲೆಯ 6,14,923 ಮಂದಿ ಮತ ನೀಡಿದ್ದಾರೆ. ಹಾಗಾಗಿ ಜನರ ಹಿತದೃಷ್ಟಿ ಕಾಯ್ದುಕೊಳ್ಳುವ ಜವಾಬ್ಧಾರಿ ನನಗೂ ಇದೆ. ಅವರ ಬಗ್ಗೆ ಟೀಕೆ ಮಾಡುತ್ತಿಲ್ಲ. ಕೆಲವೊಂದು ವಿಚಾರಗಳನ್ನು ಅವರ ಗಮನಕ್ಕೆ ತರಲು ಇಚ್ಚಿಸುತ್ತಿದ್ದೇನೆ. ಗೇಲ್ ಟೇಕ್ ಓವರ್ ಮಾಡಿರುವ ಜೆಬಿಎಫ್ ಕಂಪನಿಯು ಭೂಮಿ ಕಳೆದುಕೊಂಡ ಮನೆಯವರಿಗೆ ಶಾಶ್ವತ ಉದ್ಯೋಗ, ಮಹಾಕಾಳಿಪಡ್ಪು ರೈಲ್ವೇ ಕೆಳ ಸೇತುವೆ ನಿರ್ಮಾಣಕ್ಕಾಗಿ ಆ ಭಾಗದ ರಸ್ತೆಯಲ್ಲಿ ಸಂಚಾರ ಸ್ಥಗಿತ ಆಗಿ ಹಲವು ವರ್ಷಗಳಾಗಿವೆ. ಅದನ್ನು ಪುನರಾರಂಭಿಸುವ ನಿಟ್ಟಿನಲ್ಲಿ ಕೆಲಸವಾಗಲಿ. ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸದ್ಯ ಗಲ್ಫ್ ದೇಶಗಳ ನಡುವೆ ಮಾತ್ರವೇ ವಿಮಾನ ಸಂಚಾರ ನಡೆಯುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಗಿಟ್ಟಿಸಿದ ಸಿಂಗಾಪುರ ಏರ್ಲೈನ್ಸ್ ಎಲ್ಲಿಗೆ ಹೋಯಿತು. ಮುಂಬೈ ಮಂಗಳೂರು ನಡುವೆ ಹೆಚ್ಚುವರಿ ವಿಮಾನ ಸಂಚಾರಕ್ಕೆ ಅವಕಾಶಕಲ್ಪಿಸುವುದು, ಕೂಳೂರು ಸೇತುವೆ ಕಾಮಗಾರಿ ಪೂರ್ಣಗೊಳಿಸುವ ಬಗ್ಗೆ ಸಂಸದರು ಆದ್ಯತೆ ನೀಡಲಿ ಎಂದು ಹೇಳಿದರು.

ಸ್ಥಳೀಯ ಶಾಸಕ ವೇದವ್ಯಾಸ ಕಾಮತರು ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಸಾಂವಿಧಾನಿಕ ಹುದ್ದೆಯಲ್ಲಿರುವ ಶಾಸಕರ ಬಾಯಲ್ಲಿ ಇಂತಹ ಮಾತುಗಳು ಬರಬಾರದು. ಕರ್ನಾಟಕದ ಪೊಲೀಸರಿಗೆ ವಿಶೇಷ ಗೌರವ ಇದೆ. ಜವಾಬ್ಧಾರಿಯುತ ಸ್ಥಾನದಲ್ಲಿರುವ ಶಾಸಕರು ತಮ್ಮ ಮಾತಿನ ಮೇಲೆ ಎಚ್ಚರ ವಹಿಸಬೇಕು. ಅಭಿವೃದ್ಧಿ ವಿಚಾರದಲ್ಲಿ, ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಶಾಸಕರು ಸಚಿವರ ಜೊತೆ ಚರ್ಚಿಸಿ ಸಲಹೆ ನೀಡಲಿ. ಆದರೆ ಈ ರೀತಿಯ ವರ್ತನೆ ಶಾಸಕರಾಗಿ ಆಯ್ಕೆ ಮಾಡಿದ ಜನರನ್ನು ವಂಚಿಸಿದಂತೆ ಎಂದು ಪದ್ಮರಾಜ್ ಹೇಳಿದರು.

ಮಧ್ಯರಾತ್ರಿಯಲ್ಲಿ ಪೊಲೀಸರು ನಾಯಕರ ಮನೆಗಳಿಗೆ ತೆರಳಿ ತೊಂದರೆ ನೀಡುತ್ತಿರುವ ಬಗ್ಗೆ ಬಿಜೆಪಿ ನಾಯಕರ ಆಕ್ಷೇಪ ಎಂಬ ಸುದ್ದಿಗಾರರ ಪ್ರಶ್ನೆಗೆ, ಮಧ್ಯರಾತ್ರಿ ಪೊಲೀಸರು ಯಾರಿಗಾಗದರೂ ತೊಂದರ ನೀಡುವ ಬಗ್ಗೆ ನಮ್ಮದೂ ಆಕ್ಷೇಪವಿದೆ. ಆದರೆ, ಪೊಲೀಸ್ ಇಲಾಖೆಗೆ ಸರಕಾರ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ. ಯಾವುದೇ ಪ್ರಕರಣಗಳಿಗೆ ಸಂಬಂಧಿಸಿ ನೋಟೀಸು ನೀಡುವ ಮುನ್ನ ಕೆಲವೊಂದು ಪ್ರಕ್ರಿಯೆಗಳಿರುತ್ತವೆ. ಈ ಬಗ್ಗೆ ಆಕ್ಷೇಪ ಇದ್ದರೆ ಸಂಬಂಧ ಪಟ್ಟ ಅಧಿಕಾರಿಗಳ ಗಮನಕ್ಕೆ ತರಲಿ, ಅದು ಬಿಟ್ಟು ಪೊಲೀಸರನ್ನು ಬೆದರಿಸುವ ರೀತಿಯಲ್ಲಿ ವರ್ತಿಸುವುದು ಸರಿಯಲ್ಲ ಎಂದರು.

ಹಿಂದೆ ಫಯಾಝ್ ಹತ್ಯೆ ಆದಾಗ ಆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ತಮಗೆ ಸಂಬಂಧವೇ ಇಲ್ಲ ಎಂದಿದ್ದವರು, ಈಗ ಆತ ತಮ್ಮ ಕಾರ್ಯಕರ್ತ ಎಂದು ಹೇಗೆ ಹೇಳುತ್ತಾರೆ. ಕೋಮು ಗಲಭೆಗೆ ಸಂಬಂಧಿಸಿ ಭಾಗಿಯಾದವರು ಜೈಲಿನಿಂದ ಹೊರಬಂದಾಗ ಅವರಿಗೆ ಹೂಹಾರ ಹಾಕಿ ಸ್ವಾಗತಿಸುತ್ತಿರುವುದರಿಂದಲೇ ಆರ್ಥಿಕವಾಗಿ ಹಿಂದುಳಿದ ಸಮುದಾಯದ ಯುವಕರು ಹಾದಿ ತಪ್ಪುತ್ತಿದ್ದಾರೆ. ಹೆಣಗಳ ಮೇಲೆ ರಾಜಕೀಯ ಮಾಡುವುದು ಬಿಜೆಪಿ ಜಾಯಮಾನ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪದ್ಮರಾಜ್ ಪ್ರತಿಕ್ರಿಯಿಸಿದರು.

ರೆಹಮಾನ್ ಕೊಲೆ ಪ್ರಕರಣದ ಬಗ್ಗೆ ಮಾಹಿತಿ ನೀಡುವಲ್ಲಿ ಪೊಲೀಸ್ ಇಲಾಖೆ ವಿಳಂಬ ಮಾಡುತ್ತಿರುವ ಕುರಿತ ಪ್ರಶ್ನೆಗೆ, ತನಿಖೆಯ ವಿಚಾರದಲ್ಲಿ ನಾವು ಯಾರೂ ಹಸ್ತಕ್ಷೇಪ ಅಥವಾ ಪ್ರತಿಕ್ರಿಯೆ ನೀಡುವಂತಿಲ್ಲ. ಕೆಲವೊಂದು ವಿಚಾರಗಳಲ್ಲಿ ಪೊಲೀಸರು ಗೌಪ್ಯತೆ ಕಾಪಾಡಿಕೊಂಡಿರುತ್ತಾರೆ. ತಾಳ್ಮೆ ಇರಲಿ, ಉತ್ತಮ ಅಧಿಕಾರಿಗಳು ಇದ್ದಾರೆ. ಪಕ್ಷಪಾತ ಇಲ್ಲದೆ ತನಿಖೆ ನಡೆಸಲಿದ್ದಾರೆ ಎಂದು ಪದ್ಮರಾಜ್ ಹೇಳಿದರು.


Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
Inline Feedbacks
View all comments
wpDiscuz
0
0
Would love your thoughts, please comment.x
()
x
Exit mobile version