ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ

Spread the love

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ

ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ ದರೋಡೆ ಪ್ರಕರಣ ಸಂಬಂಧ ಮತ್ತೆ ನಾಲ್ವರು ಆರೋಪಿಗಳನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕೇರಳದ ಕಣ್ಣೂರು ಮೂಲದ ಮಿಥುನ್ ಲಾಲ್, ಶ್ರೀರಾಗ್, ಮಡಿಕೇರಿಯ ಉಬೈದ್, ಝಿಯಾದ್ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಪೈಕಿ ಮಿಥುನ್, ಉಬೈದ್ ಮತ್ತು ಝಿಯಾದ್ ಈ ಮೂವರು ನಿರೀಕ್ಷಣಾ ಜಾಮೀನು ಅರ್ಜಿಸಲ್ಲಿಸಲು ತಮ್ಮ ವಕೀಲರೊಂದಿಗೆ ಮಂಗಳೂರು ನ್ಯಾಯಾಲಯಕ್ಕೆ ಬಂದಿದ್ದ ವೇಳೆ ಪೊಲೀಸರು ಬಂಧಿಸಿದ್ದು, ಶ್ರಿರಾಗ್ ತನ್ನ ವಕೀಲರೊಂದಿಗೆ ಪೊಲೀಸರಿಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.

ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಒಂದು ಇನ್ನೋವಾ ಮತ್ತು ಒಂದು ಸ್ವಿಫ್ಟ್‌ ಕಾರು, ಕಬ್ಬಿಣದ ರಾಡ್‌, ಅಪಹರಿಸಿದ್ದ ಉದ್ಯಮಿಯ 10ಗ್ರಾಂ ತೂಕದ ಚಿನ್ನದ ಉಂಗುರ ಮೊದಲಾದವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕೃತ್ಯದ ಪ್ರಮುಖ ಆರೋಪಿ ಶಿಜಿನ್ ಗಂಗಾಧರನ್ ಸಹಿತ ಕೃತ್ಯದಲ್ಲಿಭಾಗಿಯಾಗಿದ್ದ 13 ಮಂದಿ ಆರೋಪಿಗಳ ಗುರುತನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಪೈಕಿ 7ಮಂದಿಯನ್ನು ಬಂಧಿಸಿರುವ ಪೊಲೀಸರು ಉಳಿದ ಆರೋಪಿಗಳ ಬಂಧನಕ್ಕಾಗಿ ಕಾರ್ಯಾಚಾರಣೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.


Spread the love
Subscribe
Notify of

0 Comments