ಮಂಗಳೂರು:  ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Spread the love

ಮಂಗಳೂರು:  ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಮಂಗಳೂರು:  ವಿಕಲಚೇತನರಿಗೆ ವಿಕಲಚೇತನರ ಮೂಲಕವೇ ಅವರು ವಾಸಿಸುವ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ಯೋಗ ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಕಲ್ಪಿಸುವ ದೃಷ್ಠಿಯಿಂದ ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ನಗರ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡುವ ಸಲುವಾಗಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಮಹಾನಗರಪಾಲಿಕೆ ಕಚೇರಿಯಲ್ಲಿ ಹುದ್ದೆ ಇರುತ್ತದೆ.

ಅರ್ಹತೆ :
ನಗರ ಪುನರ್ವಸತಿ ಕಾರ್ಯಕರ್ತರು ಸ್ಥಳೀಯರಾಗಿರಬೇಕು. 18-45 ವರ್ಷದ ಆರೋಗ್ಯವಂತರಾಗಿರಬೇಕು. ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಉತ್ತೀರ್ಣ/ ಅನುತ್ತೀರ್ಣರಾಗಿರಬೇಕು. ಅಂಗವಿಕಲರಾಗಿರಬೇಕು, ಭಾಗಶಃ ಅಂಧರಿಗೆ/ಭಾಗಶಃ ಶ್ರವಣದೋಷವುಳ್ಳವರಿಗೆ  ಮತ್ತು ದೈಹಿಕ ಅಂಗವಿಕಲರಿಗೆ ಅವಕಾಶ ಕಲ್ಪಿಸಲಾಗುತ್ತದೆ. ಅಂಗವಿಕಲತೆಯು ಶೇ. 40% ಇರಬೇಕು. ಅಂಗವಿಕಲತೆಯ ಬಗ್ಗೆ ವೈದ್ಯಕೀಯ ಮಂಡಳಿಯ ಪ್ರಮಾಣ ಪತ್ರ/ಗುರುತಿನ ಚೀಟಿಯ ದಾಖಲೆ ಒದಗಿಸಬೇಕು.

ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಅರ್ಜಿ ನಮೂನೆಯನ್ನು ನಗರದ ಉರ್ವಸ್ಟೋರ್‍ನಲ್ಲಿರುವ ಜಿಲ್ಲಾ ಪಂಚಾಯತ್ ಕಟ್ಟಡ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಚೇರಿಗೆ ನೀಡಬೇಕು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ. 9110897458 ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love