Home Mangalorean News Kannada News ಮಣಿಪಾಲ: ರಸ್ತೆಯ ಡಿವೈಡರ್ ಗೆ ಬೈಕ್ ಡಿಕ್ಕಿ – ಸವಾರ ಮೃತ್ಯು

ಮಣಿಪಾಲ: ರಸ್ತೆಯ ಡಿವೈಡರ್ ಗೆ ಬೈಕ್ ಡಿಕ್ಕಿ – ಸವಾರ ಮೃತ್ಯು

Spread the love

ಮಣಿಪಾಲ: ರಸ್ತೆಯ ಡಿವೈಡರ್ ಗೆ ಬೈಕ್ ಡಿಕ್ಕಿ – ಸವಾರ ಮೃತ್ಯು

ಮಣಿಪಾಲ: ಪರ್ಕಳ ರಾಷ್ಟ್ರೀಯ ಹೆದ್ದಾರಿಯ ರಸ್ತೆ ವಿಭಾಜಕದ ಬಳಿ ಬೈಕ್ ಸವಾರರೊಬ್ಬರು ಅಪಘಾತದಿಂದ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಬುಧವಾರ ನಸುಕಿನ ಜಾವ ನಡೆದಿದೆ.

ಮೃತ ಯುವಕ ಹಿರಿಯಡ್ಕದ ನಿವಾಸಿ ಅಕ್ಷಯ ಭಟ್ (26ವ) ಎಂದು ಗುರುತಿಸಲಾಗಿದೆ.

ಮೃತ ಅಕ್ಷಯ್ ಭಟ್ ಅವಿಹಾಹಿತನಾಗಿದ್ದು, ಅಡಿಗೆ ವೃತ್ತಿ ಮಾಡಿಕೊಂಡಿದ್ದರು. ಇಂದ್ರಾಳಿಯ ದೇವಸ್ಥಾನವೊಂದರಲ್ಲಿ ನವರಾತ್ರಿಯ ಸಾರ್ವಜನಿಕ ಅನ್ನಸಂತರ್ಪಣೆ ಅಡಿಗೆ ಕೆಲಸ ನಿರ್ವಹಿಸಲು ಮನೆಯಿಂದ ಬರುವ ಸಮಯ ಈ ದುರ್ಘಟನೆ ನಡೆದಿದೆ.

ಮಣಿಪಾಲ ಪೋಲಿಸ್ ಠಾಣೆಯ ಪೋಲಿಸರು ಘಟನಾ ಸ್ಥಳಕ್ಕೆ ಬಂದು ಕಾನೂನು ಪ್ರಕ್ರಿಯೆ ನಡೆಸಿದರು. ಶವವನ್ನು ಕೆ.ಎಂ ಸಿಯ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡುವರು ನೆರವಾದರು.

ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Exit mobile version