ಮುತಾಲಿಕ್ ಸ್ಪರ್ಧೆ ಹಿಂದುತ್ವಕ್ಕಾಗಿ ಅಲ್ಲ ಬದಲು ‘ನೋಟಿ’ಗಾಗಿ – ಸುನೀಲ್ ಕುಮಾರ್ ತಿರುಗೇಟು

Spread the love

ಮುತಾಲಿಕ್ ಸ್ಪರ್ಧೆ ಹಿಂದುತ್ವಕ್ಕಾಗಿ ಅಲ್ಲ ಬದಲು ‘ನೋಟಿ’ಗಾಗಿ – ಸುನೀಲ್ ಕುಮಾರ್ ತಿರುಗೇಟು

ಉಡುಪಿ: ಪ್ರಮೋದ್ ಮುತಾಲಿಕ್ ಅವರು ಸ್ವಂತ ಬುದ್ದಿಯಿಂದ ನನ್ನ ವಿರುದ್ದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಬದಲಾಗಿ ಆಮಿಷಕ್ಕೆ ಒಳಗಾಗಿಯೇ ಸ್ಪರ್ಧಿಸಲು ಬಯಸಿದ್ದೀರಿ. ನಿಮ್ಮ ಸ್ಪರ್ಧೆಯ ಉದ್ದೇಶ ಹಿಂದುತ್ವದ ಹಿತ ಅಲ್ಲ, ಜನತೆಯ ಹಿತವಲ್ಲ ಬದಲಾಗಿ ತನು ಮನ ಧನ ನೋಟಿಗಾಗಿ ಅನ್ನೋದು ಹೇಳಿಕೆಯಿಂದ ಸ್ಪಷ್ಟವಾಗಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸಚಿವರು ಪ್ರಿಯ ಮುತಾಲಿಕ್ ಜೀ, ನೀವು ಆಮಿಷಕ್ಕೆ ಒಳಗಾಗಿಯೇ ಕಾರ್ಕಳದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೀರಿ ಎಂದು ನಮಗೆ ಮೊದಲೇ ಅನುಮಾನವಿತ್ತು. ಅದೀಗ ನಿಜವಾಗಿದೆ !

ಸ್ವಂತ ಬುದ್ಧಿಯಿಂದ ನೀವು ನನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ. ನೀವು ಕಾರ್ಕಳದಿಂದ ಸ್ಪರ್ಧೆಗೆ ಇಳಿಯುವುದನ್ನು ನಾನು ಮೊದಲೇ ಸ್ವಾಗತಿಸಿದ್ದೇನೆ. ಈಗ ನಿಮಗೆ ತನು ಮನ ಧನ ಸಹಾಯ ಮಾಡುವವರೂ ಕಾರ್ಕಳಕ್ಕೆ ಬಂದು ಪ್ರಚಾರ ಮಾಡಲಿ ಎಂದು ನಾನು ಆಶಿಸುತ್ತೇನೆ.

ನಿಮ್ಮ ಸ್ಪರ್ಧೆಯ ಉದ್ದೇಶ ಏನೆಂಬುದನ್ನು ಕೆಲ ದಿನಗಳ ಹಿಂದೆ ” ವೋಟು, ನೋಟು” ಹೇಳಿಕೆಯ ಮೂಲಕ ತಿಳಿಸಿದ್ದಿರಿ. ಈಗ ತನುಮನಧನ ಸಹಾಯವಿದೆ ಎಂದು ಹೇಳುತ್ತಿದ್ದೀರಿ. ಒಟ್ಟಾರೆಯಾಗಿ ನಿಮ್ಮಈ ಸ್ಪರ್ಧೆಯ ಉದ್ದೇಶ ಕಾರ್ಕಳದ ಹಿತವಲ್ಲ, ಹಿಂದುತ್ವದ ಹಿತವಲ್ಲ, ಜನತೆಯ ಹಿತವೂ ಅಲ್ಲ. ಅದು ” ತನು- ಮನ-ಧನ” – ನೋಟಿಗಾಗಿ ಎಂಬುದು ನಿಮ್ಮ ಹೇಳಿಕೆಯಲ್ಲೇ ಸ್ಪಷ್ಟವಾಗಿದೆ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಲು ಮತದಾರರಿಂದ ಆರ್ಥಿಕ ಸಹಾಯ ಯಾಚಿಸಿದ್ದ ಮುತಾಲಿಕ್ ವೋಟಿನ ಜೊತೆ ನೂರರ ನೋಟು ಕೊಡಿ ಎಂದು ಹೇಳಿದ್ದರು.


Spread the love