
ಮೈಸೂರು ದಸರಾ ಜಂಬೂಸವಾರಿ ಮೆರಗು ತಂದ ಸ್ತಬ್ದ ಚಿತ್ರಗಳು
ಮೈಸೂರು: ಐತಿಹಾಸಿಕ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಗೆ ಲಕ್ಷಾಂತರ ಮಂದಿ ಬುಧವಾರ ಸಾಕ್ಷಿಯಾದರು. ಈ ಒಂದು ಅಪರೂಪದ ಕ್ಷಣಗಳಿಗಾಗಿ ವರ್ಷದಿಂದ ಕಾಯುತ್ತಿದ್ದ ಮಂದಿ ಜಂಬೂ ಸವಾರಿಯಲ್ಲಿ ಸಾಗಿ ಬಂದ ಸ್ತಬ್ದ ಚಿತ್ರಗಳು ಮತ್ತು ಜನಪದ ಕಲಾತಂಡಗಳನ್ನು ನೋಡಿ ಕೃತಾರ್ಥರಾದರು.
ಸುಮಾರು 47 ಸ್ತಬ್ದ ಚಿತ್ರಗಳ ಪೈಕಿ ಸುಮಾರು 31 ಸ್ತಬ್ದ ಚಿತ್ರಗಳು ಎಲ್ಲ ಜಿಲ್ಲೆಗಳ ವಿಶೇಷತೆಗಳನ್ನು ತೆರೆದಿಟ್ಟವು. ಚಾಮರಾಜನಗರದ ಸ್ತಬ್ದ ಚಿತ್ರದಲ್ಲಿ ಅಪ್ಪು ವೀರಾಜಿಸಿದ್ದು ಕಂಡು ಬಂದಿತು. ಈ ಕ್ಷಣಕ್ಕಾಗಿ ಬೆಳಗ್ಗಿನಿಂದಲೇ ಸುತ್ತಮುತ್ತಲಿನ ಹಳ್ಳಿಗಳಿಂದ, ಮೊದಲೇ ನಗರಕ್ಕೆ ಬಂದು ವಾಸ್ತವ್ಯ ಹೂಡಿದ್ದ ಲಕ್ಷಾಂತರ ಮಂದಿ ಅರಮನೆ ಹಾಗೂ ಜಂಬೂಸವಾರಿ ಸಾಗುವ ಮಾರ್ಗದ ಇಕ್ಕೆಲಗಳಲ್ಲಿ ಜಮಾಯಿಸಿದ್ದರು. ಪಾಸ್ ಪಡೆದವರು ಕಾಯ್ದಿರಿಸಿದ ಸ್ಥಳಗಳಲ್ಲಿ ಆಸೀನರಾದರೆ, ಉಳಿದವರ ಪೈಕಿ ಕೆಲವರು ರಸ್ತೆ ಬದಿಯಲ್ಲಿ ಸೂಕ್ತವಾದ ಜಾಗವನ್ನು ಆರಿಸಿಕೊಂಡು ಆಸೀನರಾದರೆ, ಮತ್ತೆ ಕೆಲವರು ಕಟ್ಟಡ ಹಾಗೂ ಮರಗಳ ಮೇಲೆ ಹತ್ತಿ ಕುಳಿತು ಜಂಬೂಸವಾರಿಯನ್ನು ವೀಕ್ಷಿಸಲು ಹಾತೊರೆಯುತ್ತಿದ್ದದ್ದು ಕಂಡು ಬಂದಿತು.
ಸಂಪ್ರದಾಯದಂತೆ ಬೆಳಿಗ್ಗೆ ಅರಮನೆ ದರ್ಬಾರ್ ಹಾಲ್ನಲ್ಲಿ ಸಾಂಪ್ರದಾಯಿಕ ವಿಧಿವಿಧಾನ ಮುಗಿಸಿದ ಯದುವೀರ ಕೃಷ್ಣರಾಜ ಚಾಮರಾಜದತ್ತ ಒಡೆಯರ್ ಸಂಪ್ರದಾಯದಂತೆ ಅರಮನೆಯಿಂದ ತೆರಳಿ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದರು. ಇದೇ ಸಂದರ್ಭ ಕರಿತೊಟ್ಟಿಯಲ್ಲಿ ವಜ್ರಮುಷ್ಠಿ ಕಾಳಗ ನಡೆಯಿತು. ಬನ್ನಿಪೂಜೆ ನೆರವೇರಿಸಿ ಬಂದ ಬಳಿಕ ಒಡೆಯರ್ ಅವರ ಅಪ್ಪಣೆ ಪಡೆದ ಬಳಿಕ ಜಂಬೂಸವಾರಿಗೆ ಮುಂದಿನ ವ್ಯವಸ್ಥೆಯನ್ನು ಕೈಗೊಳ್ಳಲಾಯಿತು.
ಮಧ್ಯಾಹ್ನ ನಿಗದಿತ ಮುಹೂರ್ತದಲ್ಲಿ ಬಲರಾಮ ದ್ವಾರದ ಶ್ರೀಕೋಟೆ ಆಂಜನೇಯಸ್ವಾಮಿ ದೇವಾಲಯದ ಬಳಿ ನಂದಿಧ್ವಜಕ್ಕೆ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು ಪೂಜೆ ಸಲ್ಲಿಸಿ ಜಂಬೂಸವಾರಿಗೆ ಚಾಲನೆ ನೀಡಲಾಯಿತು. ಈ ವೇಳೆ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಚಿವರಾದ ಬಿ.ಸಿ.ಪಾಟೀಲ್, ಸುನೀಲ್ ಕುಮಾರ್, ಜಿಲ್ಲಾಧಿಕಾರಿ ಗೌತಮ್್ ಬಗಾದಿ ಸೇರಿದಂತೆ ಹಲವರು ಇದ್ದರು.
ಸಿಂಗಾರಗೊಂಡ ಗಜಪಡೆ ಪೈಕಿ ನಿಶಾನೆ ಆನೆಯಾಗಿ ಅರ್ಜುನ ಮುನ್ನಡೆದರೆ ಅದರ ಹಿಂದೆ, ಬಾಗಲಕೋಟೆ- ಮುದೋಳ್ ಶ್ವಾನಗಳು, ಇಳಕಲ್ ಸೀರೆ, . ಬಳ್ಳಾರಿ- ದುರ್ಗಮ್ಮ ದೇವಸ್ಥಾನ, ಬೆಳಗಾವಿಯ ಶ್ರೀ ರೇಣುಕಾದೇವಿ ದೇವಸ್ಥಾನ, ಕಮಲ ಬಸದಿ, ಬೆಂಗಳೂರು(ಗ್ರಾ)- ಕಪಿಲೇಶ್ವರ ದೇವಸ್ಥಾನ, ಜೈನ ಬಸದಿ, ಬೆಂಗಳೂರು(ನ)- ಕಡಲೆಕಾಯಿ ಪರಸೆ, ಬಸವಣ್ಣಗುಡಿ, ಬೀದರ್- ಅನುಭವ ಮಂಟಪ, ಚಾಮರಾಜನಗರ- ವನ್ಯಧಾಮ, ಶ್ರೀ ಮಹದೇಶ್ವರ ವಿಗ್ರಹ, ಪುನೀತ್ ರಾಜ್ ಕುಮಾರ್ ಪ್ರತಿಮೆ. ಚಿಕ್ಕಬಳ್ಳಾಪುರ- ಗ್ರೀನ್ ನಂದಿ, ಭೋಗನಂದೀಶ್ವರ ದೇವಸ್ಥಾನ, ಚಿಕ್ಕಮಗಳೂರು- ಸಪ್ತನದಿಗಳ ತವರು, ಚಿತ್ರದುರ್ಗ- ವಾಣಿ ವಿಲಾಸ ಜಲಾಶಯ, ಒನಕೆ ಓಬವ್ವ, ಕುದುರೆ ಮೇಲೆ ಆಸೀನರಾಗಿರುವ ಮದಕರಿ ನಾಯಕ ಪ್ರತಿಮೆ, ದೀಪಸ್ಥಂಭ, ದಕ್ಷಿಣ ಕನ್ನಡ- ಕಂಬಳ, ಹುಲಿವೇಷ, ಭೂತಕೋಲ, ದಾವಣಗೆರೆ- ಸಂತೆ ಬೆನ್ನೂರು, ಪುಷ್ಕರಣೆ, ಧಾರವಾಡ- ಸಂಗೀತ ದಿಗ್ಗಜರು, ಗದಗ- ಶ್ರೀಕ್ಷೇತ್ರ ಶ್ರೀಮಂತಗಢ, ಹೊಳಲಮ್ಮ ದೇವಿ, ಶಿವಾಜಿ, ಹಾಸನ- ಬೇಲೂರು, ಹಳೇಬೀಡ್, ಶ್ರವಣ ಬೆಳಗೊಳ ಗೊಮ್ಮಟಗಿರಿ, ಹಾವೇರಿ- ಗುರುಗೋವಿಂದ ಭಟ್ಟರು, ಸಂತ ಶಿಶುನಾಳ ಶರೀಫರು, ಮುಕ್ತೇಶ್ವರ ದೇವಾಲಯ, ಕಲಬುರ್ಗಿ- ರಾಜವಂಶಸ್ಥರ ಕೋಟೆ, ಚಿಂಚೋಳಿ ಅರಣ್ಯ ಪ್ರದೇಶ, ಕೊಡಗು- ಬ್ರಹ್ಮಗಿರಿ ಬೆಟ್ಟ, ಭಗಂಡೇಶ್ವರ ದೇವಾಲಯ, ತಲಕಾವೇರಿ ತೀರ್ಥೋದ್ಭವ, ಕೋಲಾರ- ಬಿ.ಕೆ.ಎಸ್ ಅಯ್ಯಂಗಾರ್ ಯೋಗಥಾನ್, ಅಂತರಗಂಗೆ ಬೆಟ್ಟ, ಕೊಪ್ಪಳ- ಆನೆಗುಂದಿ ಬೆಟ್ಟ, ಕಿನ್ನಾಳ ಗೊಂಬೆಗಳು, ಅಂಜನಾದ್ರಿ ಬೆಟ್ಟ, ಮಂಡ್ಯ- ಮಂಡ್ಯ ಜಿಲ್ಲೆಯ ದೇವಾಲಯಗಳು, ಮೈಸೂರು- ಮೈಸೂರು ಜಿಲ್ಲೆಯ ವಿಶೇಷತೆಗಳು, ರಾಜಚೂರು- ಸಿರಿಧಾನ್ಯಗಳ ಬೆಳೆಗಳ ಅಭಿಯಾನ, ರಾಮನಗರ- ರಾಮದೇವರ ಬೆಟ್ಟ, ರಣಹದ್ದು ಪಕ್ಷಿಧಾಮ, ಶಿವಮೊಗ್ಗ- ಅಕ್ಕಮಹಾದೇವಿ ಜನ್ಮಸ್ಥಳ, ಉಡುತಡಿ, ಶಿಕಾರಿಪುರ, ತುಮಕೂರು- ನಿಟ್ಟೂರಿನ ಎಚ್ಎಎಲ್ ತಯಾರಿಕಾ ಘಟಕ, ಪಾವಗಡದ ಬೃಹತ್ ಸೋಲಾರ್ ಪಾರ್ಕ್, ಉಡುಪಿ- ಜಿ.ಐ.ಟ್ಯಾಗ್ ಹೊಂದಿರುವ ಕೈಮಗ್ಗ ಸೀರೆ ನೇಯ್ಗೆ, ಸಾಂಪ್ರದಾಯಿಕ ಕಲೆಗಳ ಪ್ರದರ್ಶನ, ಉತ್ತರ ಕನ್ನಡ- ಕಾರವಾರ ನೌಕಾಶಾಲೆ, ವಿಜಯಪುರ- ಸಿದ್ದರಾಮೇಶ್ವರ ದೇವಸ್ಥಾನ, ವಿಜಯನಗರ- ಉಗ್ರ ನರಸಿಂಹ, ದರೋಜಿ ಕರಡಿಧಾಮ, ಕಲ್ಲಿನ ರಥ, ಯಾದಗಿರಿ- ಸುರಪುರ ಕೋಟೆ, ಸ್ತಬ್ಧಚಿತ್ರಗಳ ಉಪಸಮಿತಿ, ಅರಮನೆ ವಾದ್ಯಗೋಷ್ಠಿ, ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಸೋಮನಾಥಪುರ ದೇವಾಲಯ, ಆಜಾದಿ ಕಾ ಅಮೃತ ಮಹೋತ್ಸವ.
ಇಲಾಖಾವಾರು- ಸಮಾಜ ಕಲ್ಯಾಣ ಇಲಾಖೆ- ಸಾಮಾಜಿಕ ನ್ಯಾಯ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ- ಐಟಿಐ, ಜಿಟಿಟಿಸಿ, ಕೌಶಲ ತರಬೇತಿ, ಹಾಲು ಉತ್ಪಾದಕರ ಮಹಾಮಂಡಲ- ನಂದಿನಿ ಕ್ಷೀರಧಾರೆ, ಉತ್ಪನ್ನಗಳು, ಮೈಸೂರು ವಿಶ್ವವಿದ್ಯಾಲಯ- 106 ವರ್ಷಗಳ ಇತಿಹಾಸ, ಕಾವೇರಿ ನೀರಾವರಿ ನಿಗಮ- ರೈತರು ಮತ್ತು ಸಾರ್ವಜನಿಕರಿಗೆ ಆಗುವ ಅನುಕೂಲಕಗಳು, ಸೆಸ್ಕ್- ಡಿಡಿಯು ಯೋಜನೆ, ಬೆಳಕು ಯೋಜನೆ, ಪರಿವರ್ತಕ ಅಭಿಯಾನ, ವಾರ್ತಾ ಮತ್ತು ಪ್ರಚಾರ ಇಲಾಖೆ- ಇಲಾಖೆ ಕಾರ್ಯಕ್ರಮಗಳು, ಡಾ.ಬಾಬು ಜಗಜೀವನರಾಂ ಅಭಿವೃದ್ಧಿ ನಿಗಮ- ಲಿಡ್ಕರ್ ಉತ್ಪನ್ನಗಳು, ಅಖಿಲ ಭಾರತ ವಾಕ್ ಮತ್ತು ಶ್ರಾವಣ ಸಂಸ್ಥೆ- ಎಲ್ಲರಿಗೂ ದಯೆ ಮತ್ತು ಪ್ರೀತಿಗಾಗಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ- ಆರ್ಥಿಕ ಹೊರೆಯಿಂದ ರಕ್ಷಣೆ, ನಮ್ಮ ಕ್ಲಿನಿಕ್, ಸಹಕಾರ ಇಲಾಖೆ- ಸಹಕಾರ ಕ್ಷೇತ್ರದ ಯೋಜನೆಗಳು, ಮಂಡ್ಯ ಜಿಲ್ಲೆ ಮಹಾ ಕುಂಭ ಮೇಳ- ಪುಣ್ಯ ಸ್ನಾನ ಮತ್ತು ಶ್ರೀ ಮಹದೇಶ್ವರ ಜ್ಯೋತಿ ಸ್ವೀಕಾರ, ಪ್ರವಾಸೋದ್ಯಮ ಇಲಾಖೆ- ಚನ್ನಕೇಶವ ದೇವಾಲಯ, ಬೇಲೂರು, ಹಂಪಿ ಆನೆಲಾಯ ತೆರಳಿದರೆ ಇವುಗಳ ನಡುವೆ, ಗೊರವ ಕುಣಿತ, ಹುಲಿವೇಶ, ಹಗಲುವೇಷ, ಮರಗಾಲು, ನವಿಲು ಕುಣಿತ, ಕಂಸಾಳೆ, ನಗಾರಿ ನೃತ್ಯ, ಪಟದ ಕುಣಿತ, ಪೂಜಾ ಕುಣಿತ, ಕೊರಗ ಕುಣಿತ, ಕೊಡವ ನೃತ್ಯ ಸೇರಿದಂತೆ ಜಾನಪದ ಕಲಾ ತಂಡಗಳು ಜಂಬೂಸವಾರಿಯಲ್ಲಿ ಭಾಗವಹಿಸುವುದರ ಮೂಲಕ ವೀಕ್ಷಕರನ್ನು ಆಕರ್ಷಿಸಿದವು.