
Spread the love
ರಸ್ತೆ ಅಪಘಾತದಲ್ಲಿ ಸಾಮಾಜಿಕ ಮುಖಂಡ ನೌಶಾದ್ ಸೂರಲ್ಪಾಡಿ ಸಹಿತ ಇಬ್ಬರು ಸಾವು
ಮಂಗಳೂರು: ಬಸ್ಸು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ವೇಣೂರು ಸಮೀಪ ನಡೆದಿದೆ
ಮೃತರನ್ನು ಸಾಮಾಜಿಕ, ಧಾರ್ಮಿಕ ಮುಖಂಡ ನೌಶಾದ್ ಹಾಜಿ ಸೂರಲ್ಪಾಡಿ ಹಾಗೂ ಅವರ ಕಾರು ಚಾಲಕ ಮುಷರ್ರಫ್ ಎಂದು ಗುರುತಿಸಲಾಗಿದೆ
ಕಾರು ಹಾಗೂ ಬಸ್ಸು ಮುಖಾಮುಖಿ ಢಿಕ್ಕಿ ಹೊಡೆದಿದ್ದು ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ವೇಣೂರು ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Spread the love