ರಸ್ತೆ ದಾಟಲು ನಿಂತಿದ್ದ ಇಬ್ಬರು ಯುವಕರಿಗೆ ಬಸ್ ಡಿಕ್ಕಿ – ಗಂಭೀರ ಗಾಯ

Spread the love

ರಸ್ತೆ ದಾಟಲು ನಿಂತಿದ್ದ ಇಬ್ಬರು ಯುವಕರಿಗೆ ಬಸ್ ಡಿಕ್ಕಿ – ಗಂಭೀರ ಗಾಯ

ಮಂಗಳೂರು: ಸುರತ್ಕಲ್: ಖಾಸಗಿ ಎಕ್ಸ್ ಪ್ರೆಸ್ ಬಸ್ಸಿನ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೊಸಬೆಟ್ಟು ಎಂಬಲ್ಲಿ ರವಿವಾರ ನಡೆದಿದೆ.

ಗಾಯಗೊಂಡವರನ್ನು ಅಬ್ದುಲ್ ಖಾದರ್ ಅರ್ಫಾನ್ (2) ಮತ್ತು ಅಮೀರ್ ಸಾಹೀಲ್ (20) ಎಂದು ಗುರುತಿಸಲಾಗಿದೆ

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಎಂಬಲ್ಲಿ ಮಂಗಳೂರಿಂದ ಉಡುಪಿ ಕಡೆಗೆ ಬರುತ್ತಿದ್ದ ಎಕ್ಸ್ ಪ್ರೆಸ್ ಬಸ್ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ ರಸ್ತೆ ಬದಿ ಬೈಕ್‌ ನೊಂದಿಗೆ ನಿಂತಿದ್ದ ಯುವಕರಿಗೆ ಡಿಕ್ಕಿ ಹೊಡೆಯಿತೆನ್ನಲಾಗಿದೆ. ಘಟನೆಯಲ್ಲಿ ಇಬ್ಬರೂ ಘಟನೆಯಲ್ಲಿ ಅಬ್ದುಲ್ ಖಾದರ್ ಅರ್ಫಾನ್ ಗಂಭೀರವಾಗಿ ಗಾಯಗೊಂಡಿದ್ದು ಅಮೀರ್ ಸಾಹಿಲ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳೂರು ಉತ್ತರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

Leave a Reply

Please enter your comment!
Please enter your name here