ರಾಜ್ಯದ ಆರ್ಥಿಕತೆಗೆ ಚೈತನ್ಯ: ಹರೀಶ್ ಕುಮಾರ್

Spread the love

ರಾಜ್ಯದ ಆರ್ಥಿಕತೆಗೆ ಚೈತನ್ಯ: ಹರೀಶ್ ಕುಮಾರ್
ಮಂಗಳೂರು: ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಅಭಿವೃದ್ಧಿ ಶಕೆಯೇ ಆರಂಭವಾಗಿದೆ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆ ಜನಸಾಮಾನ್ಯರು, ಮಧ್ಯಮ ವರ್ಗದವರ ಆರ್ಥಿಕತೆಗೆ ಚೈತನ್ಯ ನೀಡಿದ್ದು, ಸಿದ್ಧರಾಮಯ್ಯರು ಮಂಡಿಸಿದ ಈ ವರ್ಷದ ಬಜೆಟ್ ರಾಜ್ಯವನ್ನು ಹೊಸ ದಿಕ್ಕಿನತ್ತ ಕೊಂಡೊಯ್ಯಲಿದೆ. ಅದರಲ್ಲೂ ಕರಾವಳಿ ಜಿಲ್ಲೆಯ ಪ್ರಮುಖವಾಗಿರುವ ಮೀನುಗಾರಿಕಾ ಕ್ಷೇತ್ರಕ್ಕೆ 3ಸಾವಿರ ಕೋಟಿ ರೂ. ಮೊತ್ತದ ಯೋಜನೆ, ಸಮುದ್ರ ಅಂಬುಲೆನ್ಸ್, ಪುತ್ತೂರಿನಲ್ಲಿ ಪಶು ವೈದ್ಯಕೀಯ ಕಾಲೇಜು ನಿಜಕ್ಕೂ ಒಳ್ಳೆಯ ಯೋಜನೆಗಳು. ಈ ಮೂಲಕ ಸಿದ್ಧರಾಮಯ್ಯರು ಆರ್ಥಿಕ ವಲಯದ ಮಾಸ್ಟರ್ ಮೈಂಡ್ ಎನ್ನುವುದನ್ನು ಮತ್ತೆ ಸಾಬೀತು ಮಾಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ದಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.


Spread the love