ವಿಧಾನಸಭಾ ಸ್ಪೀಕರ್ ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ
ಮಂಗಳೂರು: ಸಂವಿಧಾನದ ಹತ್ತನೇ ಅನುಸೂಚಿ ಅಡಿಯಲ್ಲಿ ಸಭಾಧ್ಯಕ್ಷರ ಅಧಿಕಾರಗಳನ್ನು ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭಾಧ್ಯಕ್ಷ ಹಾಗೂ ಮಂಗಳೂರು ಶಾಸಕರಾದ ಯು.ಟಿ.ಖಾದರ್ ಅವರನ್ನು ಲೋಕಸಭಾ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ವಿಶೇಷ ಅಂದರೆ ಈ ರಾಷ್ಟ್ರೀಯ ಸಮಿತಿಯಲ್ಲಿ ವಿವಿಧ ರಾಜ್ಯಗಳ ಕೇವಲ 4 ಮಂದಿ ಮಾತ್ರ ಸ್ಪೀಕರ್ಗಳಿದ್ದಾರೆ. ಮಹಾರಾಷ್ಟ್ರ ಸ್ಪೀಕರ್ ರಾಹುಲ್ ನಾರ್ವೇಕರ್ ಈ ಸಮಿತಿಯ ಅಧ್ಯಕ್ಷರಾಗಿದ್ದು, ಒಡಿಶಾ ಸ್ಪೀಕರ್ ಸುರಮ ಪಾದಿ, ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಫರೀದ್, ನಾಗಲ್ಯಾಂಡ್ ಸ್ಪೀಕರ್ ಷರಿಂಗೈನ್ ಲಾಂಗ್ ಕುಮೆರ್ ಸೇರಿದಂತೆ ಈ ಮೂವರು ರಾಷ್ಟ್ರೀಯ ಸಮಿತಿ ಸದಸ್ಯರಾಗಿದ್ದಾರೆ.
ಕರ್ನಾಟಕ ವಿಧಾನಸಭೆಗೆ ಚುರುಕು ಮುಟ್ಟಿಸಿ ಅಮೂಲಾಗ್ರ ಬದಲಾವಣೆ ತಂದಿರುವ ಯು.ಟಿ.ಖಾದರ್ ಅವರಿಗೆ ಈ ಸ್ಥಾನ ಅರ್ಹವಾಗಿಯೇ ಸಂದಿವೆ.