ವಿಮಾನ ಜಾರಿದ ಪ್ರಕರಣ: ಉನ್ನತ ತನಿಖೆಗೆ ಸಚಿವ ಖಾದರ್ ಮನವಿ

Spread the love

ವಿಮಾನ ಜಾರಿದ ಪ್ರಕರಣ: ಉನ್ನತ ತನಿಖೆಗೆ ಸಚಿವ ಖಾದರ್ ಮನವಿ

ಮಂಗಳೂರು: ದುಬಾಯಿನಿಂದ ಬಂದ ವಿಮಾನವು ಮಂಗಳೂರು ವಿಮಾನ ನಿಲ್ದಾಣದಲ್ಲಿ ರನ್ ವೇಯಿಂದ ಜಾರಿದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುವಂತೆ ನಗರಾಭಿವೃದ್ಧಿ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ‌ ಖಾದರ್ ಅವರು ಆಗ್ರಹಿಸಿದ್ದಾರೆ.

ಈ ಸಂಬಂಧ ನಾಗರೀಕ ವಿಮಾನಯಾನ ಮಹಾ ನಿರ್ದೇಶಕ(ಡಿಜಿಸಿಎ)ರೊಂದಿಗೆ ಹಾಗೂ ಸಚಿವಾಲಯದೊಂದಿಗೆ ಮಾತನಾಡಿರುವ ಸಚಿವರು, ಈ ಘಟನೆ ಪೈಲಟ್ ಅಥವಾ ವಿಮಾನದ ದೋಷದಿಂದ ಏರ್ ಪೋಟ್೯ ವ್ಯವಸ್ಥೆ ಯಲ್ಲಿ ಏನಾದರೂ ಕೊರತೆಯುಂಟಾಗಿದೆಯೇ ಎಂಬುದರ ಬಗ್ಗೆ ಸಮಗ್ರ ವಿಚಾರಣೆ ನಡೆಸಬೇಕು. ಪ್ರಯಾಣಿಕರ ಸುರಕ್ಷಿತ ಪ್ರಯಾಣಕ್ಕೆ ಉತ್ಕೃಷ್ಟ ಕಾಳಜಿ ವಹಿಸಬೇಕು. ಕೂಡಲೇ ಈ ಬಗ್ಗೆ ಸ್ಪಂದಿಸಲು ಸಚಿವ ಖಾದರ್ ಆಗ್ರಹಿಸಿದ್ದಾರೆ.


Spread the love