ಶ್ರೀಕೃಷ್ಣ ಮಠಕ್ಕೆ ಇಂಧನ ಸಚಿವ ಕೆ. ಜೆ. ಜಾರ್ಜ್ ಭೇಟಿ

Spread the love

ಶ್ರೀಕೃಷ್ಣ ಮಠಕ್ಕೆ ಇಂಧನ ಸಚಿವ ಕೆ. ಜೆ. ಜಾರ್ಜ್ ಭೇಟಿ

ಉಡುಪಿ: ರಾಜ್ಯ ಇಂಧನ ಸಚಿವರಾದ ಕೆ ಜೆ ಜಾರ್ಜ್ ಅವರು ಮಂಗಳವಾರ ಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಟಿ ಶ್ರೀಕೃಷ್ಣನ ದರ್ಶನ ಪಡೆದರು.

ಬಳಿಕ ಗೀತಾಮಂದಿರದಲ್ಲಿ ಪರ್ಯಾಯ ಶ್ರೀಪಾದರ ಭೇಟಿಮಾಡಿ ಅವರಿಂದ ಆಶೀರ್ವಾದ ಪಡೆದರು ಈ ಸಂದರ್ಭದಲ್ಲಿ ಶ್ರೀಪಾದರು ಪರ್ಯಾಯ ಯೋಜನೆ ಬಗ್ಗೆ ತಿಳಿಸಿ ಭಗವದ್ಗೀತೆಯ ವ್ಯಾಪಕ ಪ್ರಚಾರವನ್ನು ತಿಳಿಸಿ ಸಚಿವರಿಗೆ ಭಗವದ್ಗೀತೆಯ ಪುಸ್ತಕವನ್ನು ನೀಡಿ ಹರಸಿದರು

ಈ ವೇಳೆ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕೆಪಿಸಿಸಿ ಕಾರ್ಯದರ್ಶಿ ಎಮ್ ಎ ಗಫೂರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ವಕ್ತಾರರಾದ ಭಾಸ್ಕರ್ ರಾವ್ ಕಿದಿಯೂರು ಹಾಗೂ ಇತರರು ಉಪಸ್ಥಿತರಿದ್ದರು.


Spread the love