ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ, ಖಾದರ್ ವಿರುದ್ಧ ಅವಹೇಳನ ಆರೋಪ : ಪ್ರಕರಣ ದಾಖಲು

Spread the love

ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ, ಖಾದರ್ ವಿರುದ್ಧ ಅವಹೇಳನ ಆರೋಪ : ಪ್ರಕರಣ ದಾಖಲು

ಮಂಗಳೂರು: ‘ಪಿರ್ಸ ಎಪ್ಪೊಲುಂ ಇಕ್ಕಟ್ಟ್ ’ ಎಂಬ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಸ್ಪೀಕರ್ ಯು.ಟಿ.ಖಾದರ್, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಮತ್ತು ಪೊಲೀಸರ ವಿರುದ್ಧ ಅವಹೇಳನಕಾರಿಯಾಗಿ ಸಂದೇಶಗಳನ್ನು ಹರಿಯಬಿಟ್ಟ ಆರೋಪದ ಮೇರೆಗೆ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಗ್ರೂಪ್‌ನಲ್ಲಿ ಅಶ್ರಫ್ ಕಿನಾರ ಕುದ್ರೋಳಿ ಎಂಬ ಹೆಸರಿನ ವ್ಯಕ್ತಿಯು ‘ಬ್ರೇಕಿಂಗ್…ಇದೀಗ ಸಜಿಪ, ಪಾವೂರ್‌ನಲ್ಲಿ ಮತ್ತೆ ಪೊಲೀಸ್ ರೈಡ್… ಅಲ್ಲಾಹನ ಸಮರ್ಪಣೆಗೆ ತಂದಿಟ್ಟ ಉಲ್ಹಿಯ ಕೊಡುವ ಹಸುಗಳನ್ನು ವಶಪಡಿಸುತ್ತಿರುವ ಪೊಲೀಸರು. ಕೇಳಿದ್ರೆ ಸರಕಾರದ ಆದೇಶದಂತೆ… ಮುಸ್ಲಿಮರ ಮತಗಳಲ್ಲಿ ಉಸಿರಾಡುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ಮುಸ್ಲಿಮರು ಒಟ್ಟಾಗಿ ಬಿಸಿ ಮುಟ್ಟಿಸಬೇಕು’ ಎಂದು ಸಂದೇಶ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ʼ57 ಸೆಕೆಂಡ್ ಇರುವ ಇನ್ನೊಂದು ವೀಡಿಯೊ ಸಂದೇಶದಲ್ಲಿ ‘ನಾನು ಸಾವರ್ಕರ್ ಅಭಿಮಾನಿ ಖಾದರ್ಕರ್, ಅಲಕ್ಕ ಪೋಯಿತಲ್ಲೇ..’ ಎಂಬುದಾಗಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮತ್ತು ಸಿಎಂ ಸಿದ್ದರಾಮಯ್ಯ ಫೋಟೋಗಳನ್ನು ಎಡಿಟ್ ಮಾಡಿ ಸಿಂಗರ್: ದಸ್ತಕೀರ್, ಲಿರಿಕ್ಸ್: ಸರಫ್ ವಿಟ್ಲ ಎಂದು ಬರೆದು ಬ್ಯಾರಿ ಭಾಷೆಯಲ್ಲಿ ಕಾಂಗ್ರೆಸ್ ಪಕ್ಷ, ಸರಕಾರದ ವಿರೋಧಿ ಹಾಡು ಹಾಡಿರುವ ವೀಡಿಯೋ ಮಾಡಿ ಹರಿಯಬಿಡಲಾಗಿದೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಸೈಬರ್‌ ಠಾಣೆ ಸಿಬ್ಬಂದಿ ಸುನಿಲ್ ಕುಮಾರ್ ನೀಡಿದ ದೂರಿನಂತೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Subscribe
Notify of

0 Comments
Inline Feedbacks
View all comments