
Spread the love
ಸಿದ್ದರಾಮಯ್ಯ ಅವರಿಂದ 24 ಹಿಂದೂಗಳ ಹತ್ಯೆ ಹೇಳಿಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು
ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ.
ಈ ಸಂಬಂಧ ಪುತ್ತೂರು ನಗರಸಭಾ ಸದಸ್ಯ ಮೊಹಮ್ಮದ್ ರಿಯಾಝ್ ಅವರು ಪುತ್ತೂರು ನಗರ ಠಾಣೆಯಲ್ಲಿ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಿಸಿದ್ದಾರೆ.
ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ್ದಾರೆ ಎಂದು ಹರೀಶ್ ಪೂಂಜಾ ಅವರು ಸುಳ್ಳು ಆರೋಪ ಮಾಡಿದ್ದು, ಈ ಬಗ್ಗೆ ತನಿಖೆ ನಡೆಸಬೇಕು. ಅಲ್ಲದೇ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮೊಹಮ್ಮದ್ ರಿಯಾಝ್ ದೂರಿನಲ್ಲಿ ಒತ್ತಾಯಿಸಿದ್ದಾರೆ. ಈ ಸಂಬಂಧ ಹರೀಶ್ ಪೂಂಜಾ ಮಾತನಾಡಿರುವ ವಿಡಿಯೋ ದಾಖಲೆಗಳನ್ನು ಪೊಲೀಸರಿಗೆ ನೀಡಿದ್ದಾರೆ.
Spread the love