
ಸಿದ್ದರಾಮಯ್ಯ ಸಿಎಂ, ಡಿಕೆಶಿ ಏಕೈಕ ಡಿಸಿಎಂ ಕಾಂಗ್ರೆಸ್ ನಿಂದ ಅಧಿಕೃತ ಘೋಷಣೆ
ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ. ಡಿಕೆ ಶಿವಕುಮಾರ್ ಅವರೊಬ್ಬರೇ ಉಪ ಮುಖ್ಯಮಂತ್ರಿ ಆಗಲಿದ್ದಾರೆ. ಈ ನಿರ್ಧಾರವನ್ನು ಕಾಂಗ್ರೆಸ್ ವರಿಷ್ಠರಾದ ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೆವಾಲ ಪ್ರಕಟಿಸಿದ್ದಾರೆ.
ಇಲ್ಲಿ ಮೇ 18, ಗುರುವಾರ ಎಐಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಇಬ್ಬರು ವರಿಷ್ಠರು ಕರ್ನಾಟಕ ಸಿಎಂ ಮತ್ತು ಡಿಸಿಎಂ ಆಯ್ಕೆ ನಿರ್ಧಾರವನ್ನು ತಿಳಿಸಿದ್ದಾರೆ. ಮೇ 20 ಮಧ್ಯಾಹ್ನ 12ಗಂಟೆಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಕೆಲ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ರಾಜ್ಯವನ್ನು ಮುನ್ನಡೆಸಲು ಸಮರ್ಥರಿದ್ದಾರೆ. ಕಾಂಗ್ರೆಸ್ನಲ್ಲಿ ಇನ್ನೂ ಕೆಲವರು ಸಿಎಂ ಆಗಲು ಅರ್ಹರಿದ್ದಾರೆ. ಆದರೆ, ಒಬ್ಬರಿಗೆ ಮಾತ್ರ ಸಿಎಂ ಅಗಲು ಸಾಧ್ಯ. ಎಐಸಿಸಿ ಅಧ್ಯಕ್ಷರು (ಮಲ್ಲಿಕಾರ್ಜುನ ಖರ್ಗೆ) ಸಿದ್ದರಾಮಯ್ಯರನ್ನು ಸಿಎಂ ಆಗಿ ಆಯ್ಕೆ ಮಾಡಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ರಣದೀಪ್ ಸುರ್ಜೆವಾಲ ಹೇಳಿದರು.