ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಹೊಂದಿದ ಇನ್ನೋರ್ವನ ಸೆರೆ

Spread the love

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಹೊಂದಿದ ಇನ್ನೋರ್ವನ ಸೆರೆ

ಮಂಗಳೂರು: ನಗರದಾದ್ಯಂತ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ ಮಾಡುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಗಳ ತಂಡದ ಇನ್ನೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿರುತ್ತಾರೆ.


ಜುಲೈ 20 ರಂದು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ಪಿಲಿಕೂರು 2 ಮಾರುತಿ ಸ್ವಿಪ್ಟ್ ಕಾರಿನಲ್ಲಿ ಬಂದು ಅಕ್ರಮವಾಗಿ ಮಾದಕ ವಸ್ತುವಾದ MDMA ನೇದನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಮೂವರನ್ನು ದಸ್ತಗಿರಿ ಮಾಡಿ ಅವರ ವಶದಿಂದ 180 ಗ್ರಾಂ ಮಾದಕ ವಸ್ತುವಾದ ಎಂಡಿಎಂಎ, ಎರಡು ಕಾರು, ಪಿಸ್ತೂಲ್, ಡ್ರಾಗನ್ ಚೂರಿ, ನಗದು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು, ಈ ದಿನ ಈ ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯದಲ್ಲಿದ್ದ ಸಮಯ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ (Methylene dioxy methamphetamine) MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಆರೋಪಿ ಮೂಡಬಿದ್ರೆ ಬಡಗ ಮೀಜಾರು ನಿವಾಸಿ ಪ್ರಸ್ತುತ ಫಳ್ನೀರ್ ವಾಸ್ ಲೇನ್ ಬಳಿ ವಾಸವಾಗಿದ್ದ ಅಬ್ದುಲ್ ಉವೇಸ್ @ ಉವೇಸ್ (29) ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ ಒಟ್ಟು 8 ಗ್ರಾಂ ತೂಕದ ರೂ. 40,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್-1, ನಗದು ರೂ. 1020/- ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 81,520/-ಆಗಬಹುದು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿರುತ್ತಾನೆ.

ಆರೋಪಿ ಅಬ್ದುಲ್ ಉವೇಸ್ ಎಂಬಾತನ ವಿರುದ್ಧ ಈ ಹಿಂದೆ ಮೂಡಬಿದ್ರಿ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕಿಡ್ನಾಫ್ ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ/ ಸೇವನೆ ಪ್ರಕರಣ, ಉಡುಪಿ ಜಿಲ್ಲೆ ಸೆನ್ ಪೊಲೀಸ್ ಠಾಣೆಯಲ್ಲಿ ಐ ಟಿ ಅಕ್ಟ್ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣಗಳ ಪೈಕಿ 2 ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ 2 ವಾರಂಟ್ ಜ್ಯಾರಿಯಲ್ಲಿರುತ್ತದೆ.

ಆರೋಪಿ ಅಬ್ದುಲ್ ಉವೇಸ್ ಎಂಬಾತನ ವಿರುದ್ಧ ಈ ಹಿಂದೆ ಮೂಡಬಿದ್ರಿ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕಿಡ್ನಾಫ್ ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ/ ಸೇವನೆ ಪ್ರಕರಣ, ಮೈಸೂರು ಜಿಲ್ಲಾ ಸೆನ್ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ, ಉಡುಪಿ ಜಿಲ್ಲೆ ಸೆನ್ ಪೊಲೀಸ್ ಠಾಣೆಯಲ್ಲಿ ಐ ಟಿ ಅಕ್ಟ್ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣಗಳ ಪೈಕಿ 3 ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ 3 ವಾರಂಟ್ ಜ್ಯಾರಿಯಲ್ಲಿರುತ್ತದೆ.

ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

 


Spread the love